ಚಂದ್ರಕಾಂತ್ ಆರ್ ನಾಯಕ್ 
ರಾಜ್ಯ

ರಾಜ್ಯದ ಅರಣ್ಯಾಧಿಕಾರಿ ಚಂದ್ರಕಾಂತ ನಾಯ್ಕ್‌ಗೆ ‘ಆರ್‌ಬಿಎಸ್‌’ ಪ್ರಶಸ್ತಿ

ಕರ್ನಾಟಕ ರಾಜ್ಯ ಅರಣ್ಯ ಅಧಿಕಾರಿ ಚಂದ್ರಕಾಂತ್ ಆರ್ ನಾಯಕ್ ಅವರು 2017ರ ಆರ್ ಬಿಎಸ್ ಅರ್ಥ್ ಹಿರೋಸ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕಾಳಿ ಹುಲಿ ಸಂರಕ್ಷಣಾ ...

ಬೆಂಗಳೂರು: ಕರ್ನಾಟಕ ರಾಜ್ಯ ಅರಣ್ಯ ಅಧಿಕಾರಿ ಚಂದ್ರಕಾಂತ್ ಆರ್ ನಾಯಕ್ ಅವರು 2017ರ ಆರ್ ಬಿಎಸ್ ಅರ್ಥ್ ಹಿರೋಸ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.ಕಾಳಿ ಹುಲಿ ಅಭಯಾರಣ್ಯ ವಲಯದ ಅರಣ್ಯಾಧಿಕಾರಿ  ಚಂದ್ರಕಾಂತ್ ನಾಯಕ್ ಅವರಿಗೆ ಗ್ರೀನ್ ವಾರಿಯರ್ ಕ್ಯಾಟಗರಿಯಲ್ಲಿ ವಯಕ್ತಿಕ ಪ್ರಶಸ್ತಿ ನೀಡಲಾಗಿದೆ. 
ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಗಾಗಿ ರಾಯಲ್‌ ಬ್ಯಾಂಕ್‌ ಆಫ್‌ ಸ್ಕಾಟ್ಲೆಂಡ್‌ (ಆರ್‌ಬಿಎಸ್‌) ನೀಡುವ ‘ಆರ್‌ಬಿಎಸ್‌ ಅರ್ಥ್‌ ಹೀರೋಸ್‌’ ಪ್ರಶಸ್ತಿಗೆ ಉತ್ತರ ಕನ್ನಡದ ಕಾಳಿ ಹುಲಿ ಅಭಯಾರಣ್ಯದ ಉಪ ವಲಯ ಅರಣ್ಯಾಧಿಕಾರಿ ಚಂದ್ರಕಾಂತ ನಾಯ್ಕ್ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿ ರು.2 ಲಕ್ಷ ನಗದು ಒಳಗೊಂಡಿದೆ. ನವದೆಹಲಿಯಲ್ಲಿ ಗುರುವಾರ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕುಳಗಿ, ಕುಂಬಾರವಾಡಾ ವನ್ಯಜೀವಿ ವಲಯದಲ್ಲಿ ಕಳ್ಳಬೇಟೆ ಹಾಗೂ ಮರದ ಮಾಫಿಯಾಕ್ಕೆ ಅವರು ಕಡಿವಾಣ ಹಾಕಿದ್ದರು. ಚಿಮ್ಮುವ ಕಪ್ಪೆಯ ಹೊಸ ಪ್ರಭೇದವು ಕುಮಟಾ ತಾಲ್ಲೂಕಿನ ಸಾಣಿಕಟ್ಟದಲ್ಲಿ 2015ರಲ್ಲಿ ಬಾರಿ ಕಂಡುಬಂದಿತ್ತು. ಇದರ ಪತ್ತೆಯಲ್ಲಿ ನಾಯ್ಕ್ ಅವರು ಮಹತ್ತರ ಪಾತ್ರ ವಹಿಸಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕಿನ ಸಾನೇಗಟ್ಟ ಗ್ರಾಮದ ನಾಯಕ್ ತಮಗೆ ಈ ಪ್ರಶಸ್ತಿ ಲಭಿಸಿರುವುದಕ್ಕೆ ಆಶ್ಚರ್ಯ ವ್ಯಕ್ತ ಪಡಿಸಿದ್ದಾರೆ. ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿರುವುದಕ್ಕೆ ನನಗೆ  ಸಂತಸವಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo crisis|ವಿಮಾನ ಸೇವೆ ವ್ಯತ್ಯಯ ತನಿಖೆಗೆ DGCAಯಿಂದ ಉನ್ನತ ಮಟ್ಟದ ಸಮಿತಿ ರಚನೆ, ಪ್ರಯಾಣಿಕರಲ್ಲಿ ಕ್ಷಮೆ ಕೇಳಿದ ಇಂಡಿಗೋ

ಪುಟಿನ್ ಭೋಜನಕೂಟ ಭಾಗಿಯಾಗಿದ್ದಕ್ಕೆ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕೆಂಗಣ್ಣು; ಪಕ್ಷ ತೊರೆಯುತ್ತಾರಾ ಮಾಜಿ ರಾಜತಂತ್ರಜ್ಞ?

5ನೇ ದಿನವೂ ಮುಂದುವರಿದ IndiGo ಅವಾಂತರ: ಬೆಂಗಳೂರು ಏರ್ ಪೋರ್ಟ್ ಲ್ಲಿ ಪ್ರಯಾಣಿಕರ ಗೋಳಾಟ, ಪರದಾಟ, ಫ್ಲೈಟ್ ಟಿಕೆಟ್ ದರ ದುಪ್ಪಟ್ಟು-Video

ಆರೋಗ್ಯಕ್ಕೆ ಅತಿ ಮುಖ್ಯ ಒಮೆಗಾ-3 ಕೊಬ್ಬಿನಾಮ್ಲ (ಕುಶಲವೇ ಕ್ಷೇಮವೇ)

‘Indigo ವಿಮಾನ’ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ಭಾರತೀಯ ರೈಲ್ವೇ ಇಲಾಖೆ, ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!

SCROLL FOR NEXT