ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ 
ರಾಜ್ಯ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಚಿವ ಜಾರ್ಜ್ ಗೆ ಮತ್ತೆ ಸಿಬಿಐ ತನಿಖೆ ತಲೆಬಿಸಿ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರನ್ನು ಕಾಂಗ್ರೆಸ್ ಸಮರ್ಥಿಸಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ಸಿಬಿಐ ಅಧಿಕಾರಿಗಳು ಪ್ರಕರಣ ಸಂಬಂಧ ಕೂಲಂಕುಶವಾಗಿ...

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರನ್ನು ಕಾಂಗ್ರೆಸ್ ಸಮರ್ಥಿಸಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ಸಿಬಿಐ ಅಧಿಕಾರಿಗಳು ಪ್ರಕರಣ ಸಂಬಂಧ ಕೂಲಂಕುಶವಾಗಿ ತನಿಖೆ ನಡೆಸಲು ಆರಭಿಸಿದ್ದಾರೆಂದು ತಿಳಿದುಬದಿದೆ. 

ಸಚಿವ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು, ಪ್ರಕರಣ ಸಂಬಂಧ ಸಿಐಡಿ ಸಲ್ಲಿಸಿದ್ದ ಬಿ-ರಿಪೋರ್ಟ್, ಸಚಿವ ಕೆ.ಜೆಜಾರ್ಜ್, ಎಡಿಬಿಪಿ ಎ.ಎಂ ಪ್ರಸಾದ್ ಹಾಗೂ ಐಜಿಪಿ ಲೋಕಾಯುಕ್ತ ಪ್ರಣಬ್ ಮೊಹಂತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಅನುಸರಿಸಿದ್ದ ವಿಳಂಬ ನೀತಿ ಸೇರಿದಂತೆ ವಿವಿಧ ಆಯಾಮಗಳಲ್ಲಿ ಕೂಲಂಕುಶವಾಗಿ ತನಿಖೆ ನಡೆಸಲಿದೆ ಎಂದು ಸಿಬಿಐ ಉನ್ನತ ಮೂಲಗಳು ಮಾಹಿತಿ ನೀಡಿವೆ. 

ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಬಿ-ರಿಪೋರ್ಟ್ ಸಲ್ಲಿಸಿದ್ದು, ಸಚಿವರು ಸಾಕ್ಷ್ಯಾಧಾರಗಳನ್ನು ನಾಶಪಡಿಸಿರುವ ಮಾತುಗಳು ಕೇಳಿ ಬಂದಿರುವ ಹಿನ್ನಲೆಯಲ್ಲಿ ಸಿಬಿಐ ಮರು ತನಿಖೆ ಆರಂಭಿಸಿದೆ ಎಂದು ತಿಳಿದುಬಂದಿದೆ. 

ಕೆಲ ದಿನಗಳ ಹಿಂದಷ್ಟೇ ಚೆನ್ನೈ ವಿಭಾಗದ ಸಿಬಿಐ ನಿರ್ದೇಶಕರು ಡಿಜಿಪಿ-ಸಿಐಡಿ ಕಿಶೋರ್ ಚಂದ್ರ ಅವರಿಗೆ ಅಧಿಕೃತ ಪತ್ರವೊಂದನ್ನು ಬರೆದಿದ್ದರು. ಪತ್ರದಲ್ಲಿ ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಬಿ-ರಿಪೋರ್ಟ್ ಸಲ್ಲಿಸಿದ್ದ ಸಿಐಡಿ ಅಧಿಕಾರಿಗಳು ಸಚಿವ ಜಾರ್ಜ್, ಮೊಹಂತಿ ಹಾಗೂ ಪ್ರಸಾತ್ ಅವರಿಗೆ ಕ್ಲೀನ್ ಚಿಟ್ ನೀಡಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ಸಂಪೂರ್ಣ ವರದಿಯನ್ನು ಸಿಬಿಐಗೆ ನೀಡುವಂತೆ ತಿಳಿಸಿದ್ದರು. ಇದರಂತೆ ಸಿಐಡಿ ಅಧಿಕಾರಿಗಳು ಪ್ರಕರಣ ಸಂಬಂಧ ಈಗಾಗಲೇ ಎಲ್ಲಾ ರೀತಿಯ ವರದಿಗಳನ್ನು ಸಿಬಿಐಗೆ ಸಲ್ಲಿಸಿದ್ದಾರೆ. 

ಮಾಜಿ ಡಿಜಿ ಮತ್ತು ಐಜಿಪಿ ಎಸ್.ಟಿ. ರಮೇಶ್ ಅವರು ಮಾತನಾಡಿ, ಸ್ಥಳೀಯ ಹಾಗೂ ಸಿಐಡಿ ಪೊಲೀಸರ ಬಳಿ ಸಿಬಿಐ ಎಲ್ಲಾ ರೀತಿಯ ದಾಖಲೆ, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದೆ ಎಂದು ಹೇಳಿದ್ದಾರೆ.
 
ಇದೇ ವೇಳೆ ಆರೋಪ ಕೇಳಿಬಂದಿರುವ ಅಧಿಕಾರಿಗಳನ್ನು ಸ್ಥಾನದಿಂದ ತೆಗೆದುಹಾಕಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಅದು ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಟ್ಟಿದ್ದು. ಸಚಿವರು ಹಾಗೂ ಅಧಿಕಾರಿಗಳನ್ನು ಸ್ಥಾನದಿಂದ ಕೆಳಗಿಳಿಸುವಂತೆ ಸಿಬಿಐ ಸುಪ್ರೀಂಕೋರ್ಟ್ ಬಳಿ ಮನವಿ ಸಲ್ಲಿಸಬಹುದು ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT