ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

'ಲೈನ್ ಮ್ಯಾನ್'ಗಳಲ್ಲ ಶಕ್ತಿ ಮಿತ್ರರು ಎಂದು ಕರೆಯಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಲೈನ್ ಮ್ಯಾನ್'ಗೆ ಪವರ್ ಮ್ಯಾನ್ ಗಳೆಂದು ಆಂಗ್ಲಭಾಷೆಯಲ್ಲಿ ನಾಮಕರಣ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಆಕ್ಷೇಪ ವ್ಯಕ್ತಡಪಡಿಸಿದರು...

ಬೆಂಗಳೂರು: ಲೈನ್ ಮ್ಯಾನ್'ಗೆ ಪವರ್ ಮ್ಯಾನ್ ಗಳೆಂದು ಆಂಗ್ಲಭಾಷೆಯಲ್ಲಿ ನಾಮಕರಣ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಆಕ್ಷೇಪ ವ್ಯಕ್ತಡಪಡಿಸಿದರು. 
ಇಂಧನ ಇಲಾಖೆ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 'ಪವರ್ ಅವಾರ್ಡ್ಸ್' ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾವುದೋ ಕಾಲದಲ್ಲಿ ಮಾರ್ಗದಾಳುಗಳಿಗೆ ಆಂಗ್ಲಭಾಷೆಯಲ್ಲಿ ಲೈನ್ ಮನ್ ಗಳಾಗಿ ನಾಮಕರಣ ಮಾಡಲಾಗಿದೆ. ಈಗಲೂ ಆಂಗ್ಲಭಾಷೆಯಲ್ಲಿ ನಾಮಕರಣ ಮಾಡುವುದು ಬೇಡ ಎಂದಿದ್ದಾರೆ. 
ಬಳಿಕ ಕನ್ನಡ ಮೇಲಿರುವ ತಮ್ಮ ಭಾಷಾಭಿಮಾನವನ್ನು ತೋರಿಸಿರುವ ಅವರು, ಕನ್ನಡದಲ್ಲಿಯೇ ಲೈನ್ ಮ್ಯಾನ್ ಗಳಿಗೆ ಹೊಸ ಹೆಸರನ್ನು ಸೂಚಿಸಿದರು. ಪವನ್ ಮ್ಯಾನ್ ಗಳ ಬದಲಾಗಿ 'ಶಕ್ತಿ ಮಿತ್ರರು ಎಂದು ಹೆಸರಿಡುವಂತೆ ಸಲಹೆ ನೀಡಿದರು. ಈ ವೇಳೆ ಕಾರ್ಯಕ್ರಮದಲ್ಲಿದ್ದ ಮಂದಿ ಸಿದ್ದರಾಮಯ್ಯ ಅವರಿಗೆ ಚಪ್ಪಾಳೆ ಹೊಡೆಯುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದರು. 
ಬಳಿಕ ಮಾತನಾಡಿರುವ ಬೆಸ್ಕಾಂ ಉದ್ಯೋಗಿ ಮಹಾದೇವ್ ಎಂಬುವದು, ಒಬ್ಬ ಕನ್ನಡಿಗನಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿರುವ ಕನ್ನಡ ಪದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಹೇಳಿದ್ದಾರೆ. 
ಬಿಡದಿಯಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿರುವ ಶಿವಾನಂದ ಪಾಟೀಲ್ ಅವರು ಮಾತನಾಡಿ, ಸಾಕಷ್ಟು ನವೀನ ಪರಿಕಲ್ಪನೆಗಳೊಂದಿಗೆ ಇದೇ ಮೊದಲ ಬಾರಿಗೆ ಇಂಧನ ಇಲಾಖೆ ಸಿಬ್ಬಂದಿಗಳಿಗಾಗಿ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್