ವಿಜಯಪುರ: ಭೀಮಾತೀರದಲ್ಲಿ ಪೊಲೀಸ್ ಮತ್ತು ರೌಡಿಗಳ ಮಧ್ಯೆ ನಡೆದ ಗುಂಡಿನ ಚಕಮಕಿ ಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಕೊಂಕಣಗಾಂವ್ ಗ್ರಾಮದಲ್ಲಿ ಲೀಸ್ ಹಾಗೂ ಭೀಮಾತೀರದ ಹಂತಕರ ನಡುವೆ ಗುಂಡಿನ ಚಕಮಕಿ ನಡೆಯಿತು.
ಕುಖ್ಯಾತ ರೌಡಿ ಧರ್ಮರಾಜ ಚಡಚಣ ಹಾಗೂ ಬೆಂಬಲಿಗರಿಂದ ಪಿಎಸ್ಐ ಗೋಪಾಲ ಹಳ್ಳೂರು ಎನ್ನುವವರ ಮೇಲೆ ಗುಂಡಿನ ದಾಳಿ ನಡೆದಿದೆ. ದಾಳಿಗೊಲಗಾದ ಪಿಎಸ್ಐ ಅವರಿಗೆ ಗುಂಡು ತಗುಲಿದ್ದು ಗಂಭೀರ ಗಾಯಗೊಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ಕಾಳಗದಲ್ಲಿ ಭಾಗಿಯಾಗಿದ್ದ ರೌಡಿ ಧರ್ಮರಾಜ ಚಡಚಣ ಪೋಲೀಸರ ಗುಂಡಿಗೆ ಬಲಿಯಾಗಿದ್ದಾನೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಧರ್ಮರಾಜನ ಮನೆ ಮೇಲೆ ದಾಳಿ ಮಾಡಲು ಹೋಗಿದ್ದ ಪಿ.ಎಸ್.ಐ. ಗೋಪಾಲ ಹಳ್ಳೂರ ಮತ್ತು ತಂಡದ ತೆರಳಿತ್ತು ಎನ್ನಲಾಗಿದ್ದು ಈ ವೇಳೆ ಗುಂಡಿನ ಕಾಳಗ ನಡೆದಿದೆ. ಸ್ಥಳಕ್ಕೆ ಎಸ್ ಪಿ ಕುಲದೀಪ ಜೈನ್ ಹಾಗೂ ಎಎಸ್ ಪಿ ಶಿವಕುಮಾರ ಗುಣಾರಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಪುತ್ರಪ್ಪ ಹಾಗೂ ಫಯಾಜ್ ಮುಫ್ತಿಫ್ ಎನ್ನುವರ ಕೊಲೆಯಲ್ಲಿ ಭಾಗಿಯಾಗಿದ್ದ ಧರ್ಮರಾಜ್, ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದ.