ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಉದ್ಯಮಿ ಅಪಹರಣ ಕೇಸ್: 24 ಗಂಟೆಯಲ್ಲೇ ಐವರನ್ನು ಬಂಧಿಸಿದ ಪೊಲೀಸರು

ಅಪಹರಣಕ್ಕೊಳಗಾಗಿದ್ದ ಆಟೋ ಮೊಬೈಲ್ ಡೀಲರ್ ನನ್ನು ರಕ್ಷಿಸಿರುವ ಮಾಗಡಿ ರೋಡ್ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ....

ಬೆಂಗಳೂರು:ಅಪಹರಣಕ್ಕೊಳಗಾಗಿದ್ದ ಆಟೋ ಮೊಬೈಲ್ ಡೀಲರ್ ನನ್ನು ರಕ್ಷಿಸಿರುವ ಮಾಗಡಿ ರೋಡ್ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ನವೀನ್ ಕುಮಾರ್ ಎಂಬಾತನನ್ನು ಬಂಧಿಸಿದ್ದ ಆರೋಪಿಗಳು ರಾಮಮೂರ್ತಿ ನಗರದ ಮನೆಯೊಂದರಲ್ಲಿ ಬಂಧಿಸಿಟ್ಟಿದ್ದರು.
ರೌಡಿನಾಗ ಅಲಿಯಾಸ್ ಗೆಡ್ಡ ನಾಗರಾಜ್, ಮೊಹಮದ್ ಅಮೀರ್, ಪ್ರಕಾಶ್, ಮುನಿರಾಜು, ಮತ್ತು ರಘು ಬಂಧಿತ ಆರೋಪಿಗಳಾಗಿದ್ದಾರೆ. ಇವರು  ಬ್ಯಾಟರಾಯನಪುರ ಮತ್ತು ವಿಜಯನಗರ ನಿವಾಸಿಗಳಾಗಿದ್ದಾರೆ.
ಕೆ.ಪಿ ಅಗ್ರಹಾರದ ಟೆಲಿಕಾಂ ಲೇಔಟ್ ನಿವಾಸಿಯಾಗಿರುವ ನವೀನ್ ಪ್ರೀ ಓನಡ್ ಕಾರ್(Pre owned Car sales) ಸೇಲ್ಸ್ ವ್ಯವಹಾರ ಮಾಡುತ್ತಿದ್ದ. ಅಕ್ಟೋಬರ್ 13 ರಂದು  ನವೀನ್ ನಾಗರಾಜ್ ಬಳಿಯಿಂದ 26 ಲಕ್ಷ ರು ಹಣ ಪಡೆದಿದ್ದ. ಆತನಿಗೆ ಹೈಎಂಡ್ ಕಾರು ಕೊಡಿಸುವುದಾಗಿ ಹೇಳಿದ್ದ.  ನವೀನ್ ಇದೇ ರೀತಿ ಹಲವು ಮಂದಿಗೆ ವಂಚಿಸಿರುವುದು ಕೆಲ ದಿನಗಳ ಬಳಿಕ ನಾಗರಾಜ್ ಗೆ ಗೊತ್ತಾಗಿದೆ, ಹೀಗಾಗಿ ಹಣ ವಾಪಸ್ ನೀಡುವಂತೆ ನವೀನ್ ಗೆ ನಾಗರಾಜ್ ಒತ್ತಾಯಿಸಿದ್ದಾನೆ.  ಹಣ ಕೊಡಲು ನಿರಾಕರಿಸಿದ ನವೀನ್ ಒಂದು ವಾರದಲ್ಲಿ ಕಾರು ಕೊಡುವುದಾಗಿ ಹೇಳಿದ್ದಾನೆ.
ಆತನ ಮಾತನ್ನು ನಂಬದ ನಾಗರಾಜ್ ನವೀನ್ ನನ್ನು ಕಿಡ್ನಾಪ್ ಮಾಡಲು ಯೋಜನೆ ರೂಪಿಸಿದ. ಒಂದು ಕಾರಿನಲ್ಲಿ  ನವೀನ್ ನನ್ನು ಅಪಹರಿಸಿದ ಗ್ಯಾಂಗ್ ರಾಮಮೂರ್ತಿ ನಗರದ ಮನೆಯಲ್ಲಿಟ್ಟಿತ್ತು. 
ಶನಿವಾರ ತಡರಾತ್ರಿ ನವೀನ್ ತಂದೆಗೆ ಕೆರ ಮಾಡಿದ  ನಾಗರಾಜ್ ಆತ ಕಿಡ್ನಾಪ್ ಆಗಿರುವುದಾಗಿ ತಿಳಿಸಿದ್ದಾನೆ, ಹಣ ನೀಡದರೇ ಮಾತ್ರ ನವೀನ್ ನನ್ನು ಕಳುಹಿಸುವುದಾಗಿ ಹೇಳಿದ್ದಾನೆ. 
ನವೀನ್ ಪತ್ನಿ ವೈದೇಶ್ವರಿ ಮಾಗಡಿ ರೋಡ್ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ವಿಜಯನಗರದ ಖಾಸಗಿ ಬ್ಯಾಂಕ್ ನಲ್ಲಿ ಹಣ ತೆಗೆದುಕೊಳ್ಳಲು ಬಂದ  ನಾಗರಾಜ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಂತರ ನವೀನ್ ನನ್ನು ಬಂಧಿಸಿಟ್ಟಿರುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ನಾಗರಾಜ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT