ಮೃತ ಆರುಷ್ 
ರಾಜ್ಯ

ಮಂಗಳೂರು: 1 ವರ್ಷದ ಕಂದಮ್ಮನನ್ನು ಬಲಿ ಪಡೆದ 'ಚಕ್ಕುಲಿ'!

ಗಂಟಲಲ್ಲಿ ಚಕ್ಕುಲಿ ಸಿಕ್ಕಿಕೊಂಡ ಪರಿಣಾಮ ಒಂದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಬೆಳ್ತಂಗಡಿ ...

ಮಂಗಳೂರು:  ಗಂಟಲಲ್ಲಿ ಚಕ್ಕುಲಿ ಸಿಕ್ಕಿಕೊಂಡ ಪರಿಣಾಮ ಒಂದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ.ಗೇರುಕಟ್ಟೆಯ ನಿವಾಸಿ ವಿಠಲ್​ ಎಂಬುವವರ ಪುತ್ರ ಆರುಷ್​ ಸಾವಿಗೀಡಾಗಿರುವ ದುರ್ದೈವಿ. 
ಮಗುವಿನ 1 ವರ್ಷದ ಹುಟ್ಟುಹಬ್ಬ ನಡೆದು ಕೇವಲ 2 ದಿನಗಳಾಗಿತ್ತು. ಮಂಗಳವಾರ ಬೆಳಗ್ಗೆ ಕುಟುಂಬದ ಸದಸ್ಯರೊಬ್ಬರು ಮಗುವಿನ ಕೈಯ್ಯಲ್ಲಿ ಚಕ್ಕುಲಿ ಚೂರೊಂದನ್ನು ನೀಡಿದ್ದಾರೆ. ಈ ಮೊದಲು ಕೂಡ ಆರುಷ್ ಚಕ್ಕುಲಿಯನ್ನು ಅಗಿದು ತಿನ್ನುತ್ತಿದ್ದ. ಆದರೆ ಈ ಬಾರಿ ಚಕ್ಕುಲಿಯನ್ನು ನುಂಗಲು ಯತ್ನಿಸಿದ್ದಾನೆ. ದುರಾದೃಷ್ಟವಶಾತ್ ಚಕ್ಕುಲಿ ತುಂಡು ಆತನ ಏರ್ ಪೈಪ್ ಒಳಗೆ ಹೋಗಿ ಉಸಿರಾಡಲು ತೊಂದರೆಯಾಗಿದೆ. 
ಇದನ್ನು ನೋಡಿದ ಕುಟುಂಬಸ್ಥರು ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಾಗಲೇ  ಮಗು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT