ಮೃತ ಆರುಷ್ 
ರಾಜ್ಯ

ಮಂಗಳೂರು: 1 ವರ್ಷದ ಕಂದಮ್ಮನನ್ನು ಬಲಿ ಪಡೆದ 'ಚಕ್ಕುಲಿ'!

ಗಂಟಲಲ್ಲಿ ಚಕ್ಕುಲಿ ಸಿಕ್ಕಿಕೊಂಡ ಪರಿಣಾಮ ಒಂದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಬೆಳ್ತಂಗಡಿ ...

ಮಂಗಳೂರು:  ಗಂಟಲಲ್ಲಿ ಚಕ್ಕುಲಿ ಸಿಕ್ಕಿಕೊಂಡ ಪರಿಣಾಮ ಒಂದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ.ಗೇರುಕಟ್ಟೆಯ ನಿವಾಸಿ ವಿಠಲ್​ ಎಂಬುವವರ ಪುತ್ರ ಆರುಷ್​ ಸಾವಿಗೀಡಾಗಿರುವ ದುರ್ದೈವಿ. 
ಮಗುವಿನ 1 ವರ್ಷದ ಹುಟ್ಟುಹಬ್ಬ ನಡೆದು ಕೇವಲ 2 ದಿನಗಳಾಗಿತ್ತು. ಮಂಗಳವಾರ ಬೆಳಗ್ಗೆ ಕುಟುಂಬದ ಸದಸ್ಯರೊಬ್ಬರು ಮಗುವಿನ ಕೈಯ್ಯಲ್ಲಿ ಚಕ್ಕುಲಿ ಚೂರೊಂದನ್ನು ನೀಡಿದ್ದಾರೆ. ಈ ಮೊದಲು ಕೂಡ ಆರುಷ್ ಚಕ್ಕುಲಿಯನ್ನು ಅಗಿದು ತಿನ್ನುತ್ತಿದ್ದ. ಆದರೆ ಈ ಬಾರಿ ಚಕ್ಕುಲಿಯನ್ನು ನುಂಗಲು ಯತ್ನಿಸಿದ್ದಾನೆ. ದುರಾದೃಷ್ಟವಶಾತ್ ಚಕ್ಕುಲಿ ತುಂಡು ಆತನ ಏರ್ ಪೈಪ್ ಒಳಗೆ ಹೋಗಿ ಉಸಿರಾಡಲು ತೊಂದರೆಯಾಗಿದೆ. 
ಇದನ್ನು ನೋಡಿದ ಕುಟುಂಬಸ್ಥರು ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಾಗಲೇ  ಮಗು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

SCROLL FOR NEXT