ರಾಜ್ಯ

ಕನ್ನಡ ನಮ್ಮ ಅಸ್ಮಿತೆ, ಕನ್ನಡ ನಮ್ಮ ಅನನ್ಯತೆ, ಕನ್ನಡವೇ ನಮ್ಮ ಆದ್ಯತೆ: ಸಿದ್ದರಾಮಯ್ಯ

Srinivasamurthy VN
ಬೆಂಗಳೂರು: 62ನೇ ಕನ್ನಡ ರಾಜ್ಯೋತ್ಸವ ಸಂಭ್ರಮದ ನಿಮಿತ್ತ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಜನತೆಗೆ ಶುಭ ಕೋರಿದ್ದಾರೆ.
ಟ್ವಿಟರ್ ನಲ್ಲಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, "ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡವೆನ್ನುವುದು ನಮಗೆ ಬದುಕು-ಭಾವ ಮಾತ್ರವೇ ಅಲ್ಲ, ಭವ್ಯ ಭವಿತವ್ಯದ ಹೆದ್ದಾರಿ ಕೂಡ ಎಂದು ಹೇಳಿದ್ದಾರೆ. ಅಂತೆಯೇ "ಕನ್ನಡತನದ ಧೀಮಂತ ಆದರ್ಶವೇ ನಮ್ಮ ಅಭಿವೃದ್ಧಿ ಮಾದರಿಯ ಹಿಂದಿನ ಪ್ರೇರಣೆಯಾಗಿದ್ದು, ಕನ್ನಡತನದ ಕೇಂದ್ರದಲ್ಲಿ ವಿಶ್ವಮಾನವತ್ವವಿದೆ, ಕನ್ನಡ ವಿಶ್ವಮಾನ್ಯವಾಗಿದೆ ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಕನ್ನಡ ನಮ್ಮ ಅಸ್ಮಿತೆ, ಕನ್ನಡ ನಮ್ಮ ಅನನ್ಯತೆ, ಕನ್ನಡವೇ ನಮ್ಮ ಆದ್ಯತೆ. ಪ್ರೀತಿಯ ಕನ್ನಡಿಗರಿಗೆ 62ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಕರ್ನಾಟಕ ರಾಜ್ಯವು ಪ್ರತ್ಯೇಕ ಧ್ವಜ ಹೊಂದಲು ಇರುವ ಕಾನೂನಾತ್ಮಕ ಅವಕಾಶಗಳನ್ನು ಪರಿಶೀಲಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
SCROLL FOR NEXT