ಸಂಗ್ರಹ ಚಿತ್ರ 
ರಾಜ್ಯ

ಕನ್ನಡ ನಮ್ಮ ಅಸ್ಮಿತೆ, ಕನ್ನಡ ನಮ್ಮ ಅನನ್ಯತೆ, ಕನ್ನಡವೇ ನಮ್ಮ ಆದ್ಯತೆ: ಸಿದ್ದರಾಮಯ್ಯ

62ನೇ ಕನ್ನಡ ರಾಜ್ಯೋತ್ಸವ ಸಂಭ್ರಮದ ನಿಮಿತ್ತ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಜನತೆಗೆ ಶುಭ ಕೋರಿದ್ದಾರೆ.

ಬೆಂಗಳೂರು: 62ನೇ ಕನ್ನಡ ರಾಜ್ಯೋತ್ಸವ ಸಂಭ್ರಮದ ನಿಮಿತ್ತ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಜನತೆಗೆ ಶುಭ ಕೋರಿದ್ದಾರೆ.
ಟ್ವಿಟರ್ ನಲ್ಲಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, "ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡವೆನ್ನುವುದು ನಮಗೆ ಬದುಕು-ಭಾವ ಮಾತ್ರವೇ ಅಲ್ಲ, ಭವ್ಯ ಭವಿತವ್ಯದ ಹೆದ್ದಾರಿ ಕೂಡ ಎಂದು ಹೇಳಿದ್ದಾರೆ. ಅಂತೆಯೇ "ಕನ್ನಡತನದ ಧೀಮಂತ ಆದರ್ಶವೇ ನಮ್ಮ ಅಭಿವೃದ್ಧಿ ಮಾದರಿಯ ಹಿಂದಿನ ಪ್ರೇರಣೆಯಾಗಿದ್ದು, ಕನ್ನಡತನದ ಕೇಂದ್ರದಲ್ಲಿ ವಿಶ್ವಮಾನವತ್ವವಿದೆ, ಕನ್ನಡ ವಿಶ್ವಮಾನ್ಯವಾಗಿದೆ ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಕನ್ನಡ ನಮ್ಮ ಅಸ್ಮಿತೆ, ಕನ್ನಡ ನಮ್ಮ ಅನನ್ಯತೆ, ಕನ್ನಡವೇ ನಮ್ಮ ಆದ್ಯತೆ. ಪ್ರೀತಿಯ ಕನ್ನಡಿಗರಿಗೆ 62ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಕರ್ನಾಟಕ ರಾಜ್ಯವು ಪ್ರತ್ಯೇಕ ಧ್ವಜ ಹೊಂದಲು ಇರುವ ಕಾನೂನಾತ್ಮಕ ಅವಕಾಶಗಳನ್ನು ಪರಿಶೀಲಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT