ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ 
ರಾಜ್ಯ

ಏಕೀಕರಣದ ಸಂಕೇತ ರಾಜ್ಯೋತ್ಸವ ಸಂಭ್ರಮದ ನಡುವೆಯೇ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು!

ರಾಜ್ಯಾದ್ಯಂತ 62ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಚಾಲ್ತಿಯಲ್ಲಿರುವಂತೆಯೇ ಅತ್ತ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಕೂಗು ಎದ್ದಿದ್ದು, ಪ್ರತ್ಯೇಕ 'ಕಲ್ಯಾಣ ಕರ್ನಾಟಕ'ಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಕಲಬುರಗಿ: ರಾಜ್ಯಾದ್ಯಂತ 62ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಚಾಲ್ತಿಯಲ್ಲಿರುವಂತೆಯೇ ಅತ್ತ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಕೂಗು ಎದ್ದಿದ್ದು, ಪ್ರತ್ಯೇಕ 'ಕಲ್ಯಾಣ ಕರ್ನಾಟಕ'ಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಕರ್ನಾಟಕ ಏಕೀಕರಣದ ಸಂಕೇತವಾಗಿರುವ ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲೇ ಹೈದರಾಬಾದ್ ಕರ್ನಾಟಕ ಪ್ರಾಂತ್ಯದ ಕಲಬುರಗಿಯಲ್ಲಿ ಪ್ರತ್ಯೇಕತೆಯ ಕೂಗು ಕೇಳಿಬಂದಿದ್ದು, ಕಲಬುರಗಿಯ ಸರ್ದಾರ್ ವಲ್ಲಭಬಾಯಿ ವೃತ್ತದ ಬಳಿ ಪ್ರತ್ಯೇಕ 'ಕಲ್ಯಾಣ ಕರ್ನಾಟಕ'ಕ್ಕಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದೇ ವೇಳೆ ಧ್ವಜಾರೋಹಣಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಪೊಲೀಸರು ಬಂಧಿಸಲು ಮುಂದಾಗುತ್ತಿದ್ದಂತೆಯೇ ಹೋರಾಟಗಾರರು ಬಂಧನಕ್ಕೆ ಬೆದರಿ ಓಡಿ ಹೋಗುವ ಮೂಲಕ ನಗೆಪಾಟಲಿಗೀಡಾದರು. ಹೈದ್ರಾಬಾದ್ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರೂ ಸಹ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಪ್ರತ್ಯೇಕ ಹೋರಾಟ ನಡೆಸಿದರು. ಈ ಕಾರ್ಯಕರ್ತರನ್ನೂ ಸಹ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT