ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಕೇಸ್: ಕಾರು ಡಿಕ್ಕಿ ಹೊಡೆದು ವೃದ್ಧೆ ಸಾವು

ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದೆಯೊಬ್ಬರು ಮೃತ ಪಟ್ಟಿರುವ ಘಟನೆ ಮತ್ತೀಕೆರೆ ಸಮೀಪದ ಎಚ್ಎಂಟಿ ರಸ್ತೆಯಲ್ಲಿ ಸಂಭವಿಸಿದೆ....

ಬೆಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದೆಯೊಬ್ಬರು ಮೃತ ಪಟ್ಟಿರುವ ಘಟನೆ ಮತ್ತೀಕೆರೆ ಸಮೀಪದ ಎಚ್ಎಂಟಿ ರಸ್ತೆಯಲ್ಲಿ ಸಂಭವಿಸಿದೆ.
ಶುಕ್ರವಾರ ಬೆಳಿಗ್ಗೆ ನಡೆದ ಅಪಘಾತದಲ್ಲಿ ಎಲಿಯಮ್ಮ (74) ಎಂಬುವರು ಮೃತಪಟ್ಟಿದ್ದಾರೆ. ಅಪಘಾತದ ನಂತರ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ಘಟನೆಯ ದೃಶ್ಯ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ಸುಳಿವು ಆಧರಿಸಿ ಯಶವಂತಪುರ ಸಂಚಾರ ಪೊಲೀಸರು ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.
ಪತಿ ಜಾಕೊಬ್ ಜತೆ ಮತ್ತೀಕೆರೆಯಲ್ಲಿ ನೆಲೆಸಿದ್ದ ಎಲಿಯಮ್ಮ, ಎಂದಿನಂತೆ ಶುಕ್ರವಾರ ಬೆಳಿಗ್ಗೆ ಮನೆ ಸಮೀಪದ ಚರ್ಚ್‌ಗೆ ಹೋಗಿದ್ದರು. ಪ್ರಾರ್ಥನೆ ಮುಗಿಸಿ 6.30 ಸುಮಾರಿಗೆ ಮನೆಗೆ ವಾಪಸಾಗಲು ಎಚ್‌ಎಂಟಿ ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕೆಂಪು ಬಣ್ಣದ ಮಾರುತಿ ಆಲ್ಟೊ ಕಾರು ಅವರಿಗೆ ಡಿಕ್ಕಿ ಹೊಡೆಯಿತು.
ಗುದ್ದಿದ ರಭಸಕ್ಕೆ ನಾಲ್ಕೈದು ಅಡಿಯಷ್ಟು ಮೇಲೆ ಎಗರಿ ಕೆಳಗೆ ಬಿದ್ದ ಎಲಿಯಮ್ಮ, ತೀವ್ರ ರಕ್ತಸ್ರಾವವಾಗಿ ನಿತ್ರಾಣರಾದರು. ತಕ್ಷಣ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು ಎಂದು ಪೊಲೀಸರು ಹೇಳಿದ್ದಾರೆ.
ಸಮೀಪದ ಕಟ್ಟಡವೊಂದರ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. 8319 ಕಾರಿನ ನೋಂದಣಿಯಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT