ಭೀಮಾ ನದಿ 
ರಾಜ್ಯ

ಕಲಬುರಗಿ: ಭೀಮಾ ನದಿ ತೀರದಲ್ಲಿ ಪ್ರವಾಹದ ಎಚ್ಚರಿಕೆ

ಮಹಾರಾಷ್ಟ್ರದ ಉಜನಿ ಜಲಾಶಯ ಸುತ್ತಮುತ್ತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಭೀಮಾನದಿ ದಡದಲ್ಲಿರುವ ಅಫ್ಜಲಪುರ ಮತ್ತು ಜೇವರ್ಗಿ ..

ಕಲಬುರಗಿ: ಮಹಾರಾಷ್ಟ್ರದ ಉಜನಿ ಜಲಾಶಯ ಸುತ್ತಮುತ್ತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಭೀಮಾನದಿ ದಡದಲ್ಲಿರುವ ಅಫ್ಜಲಪುರ ಮತ್ತು ಜೇವರ್ಗಿ ತಾಲೂಕುಗಳ ಗ್ರಾಮದ ಜನತೆಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.
ಉಜನಿ ಜಲಾಶಯದಿಂದ 5 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟಿರುವ ಕಾರಣ, ಹಾಗೂ ಅದೇ ಪ್ರಮಾಣದ ನೀರು ಭೀಮಾ ನದಿಯಿಂದ ಸೊಣ್ಣ ಜಲಾಶಯಕ್ಕೆ ಹರಿಸಿರುವ ಕಾರಣ ಒಳಹರಿವು ಹೆಚ್ಚಿದೆ ಎಂದು ಸೊಣ್ಣ ನೀರಾವರಿ ಯೋಜನೆ ಕಾರ್ಯಕಾರಿ ಎಂಜಿನೀಯರ್ ಹೇಳಿದ್ದಾರೆ.
ಸದ್ಯ, ಸೊಣ್ಣ ಜಲಾಶಯದಲ್ಲಿ 405.75 ಅಡಿ ನೀರು ಸಂಗ್ರಹವಾಗಿದೆ, ಆದರೆ ಜಲಾಶಯ 406.40 ಅಡಿ ಎತ್ತರವಿದೆ. 
ಹೀಗಾಗಿ ಭೀಮಾ ನದಿ ತೀರದಲ್ಲಿರುವ ಜೇವರ್ಗಿ ಮತ್ತು ಅಫ್ಜಲಪುರ ತಾಲೂಕಿನ ಸುತ್ತಮುತ್ತಲ ಗ್ರಾಮಗಳ ಜನರಿಗೆ ಸ್ವಿಮ್ಮಿಂಗ್ ಮತ್ತು ಬಟ್ಟೆ  ಜಾನುವಾರು ತೊಳೆಯಲು ತೆರಳದಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT