ರಾಮಲಿಂಗಾ ರೆಡ್ಡಿ 
ರಾಜ್ಯ

ಮಂಗಳೂರು ಚಲೋ: ಬೈಕ್ ರ‍್ಯಾಲಿ ಬೇಡ, ಕಾಲ್ನಡಿಗೆ ಜಾಥಾ ಮಾಡಿ: ಬಿಜೆಪಿಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಲಹೆ

ಹಿಂದೂ ಸಂಘಟನೆಯ ಯುವಕರ ಹತ್ಯೆಗಳನ್ನು ಖಂಡಿಸಿ, ಆ ಪ್ರಕರಣಗಳನ್ನು ಸಿಬಿಐ ಗೆ ವಹಿಸಬೇಕೆಂದು ಆಗ್ರಹಿಸಿ ಸೆ.05 ರಂದು ಬಿಜೆಪಿ ಮಂಗಳೂರು ಚಲೋ ಪ್ರತಿಭಟನೆಯ ಭಾಗವಾಗಿ ಕೈಗೊಂಡಿರುವ ಬೈಕ್ ರ‍್ಯಾಲಿ

ಬೆಂಗಳೂರು: ಹಿಂದೂ ಸಂಘಟನೆಯ ಯುವಕರ ಹತ್ಯೆಗಳನ್ನು ಖಂಡಿಸಿ, ಆ ಪ್ರಕರಣಗಳನ್ನು ಸಿಬಿಐ ಗೆ ವಹಿಸಬೇಕೆಂದು ಆಗ್ರಹಿಸಿ ಸೆ.05 ರಂದು ಬಿಜೆಪಿ ಮಂಗಳೂರು ಚಲೋ ಪ್ರತಿಭಟನೆಯ ಭಾಗವಾಗಿ ಕೈಗೊಂಡಿರುವ ಬೈಕ್ ರ‍್ಯಾಲಿ ಬಗ್ಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. 
ಮಂಗಳೂರು ಚಲೋ, ಬೈಕ್ ರ‍್ಯಾಲಿ ವೇಳೆಯಲ್ಲಿ ಅಹಿತಕರ ಘಟನೆಗಳು ಉಂಟಾದರೆ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ. ಬಿಜೆಪಿಯವರು ಬೈಕ್ ರ‍್ಯಾಲಿಗಾಗಿ ಅನುಮತಿ ಕೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಅವಕಾಶ ಇದೆ. ಆದರೆ ಬೈಕ್ ರ‍್ಯಾಲಿಯಿಂದಾಗಿ ಟ್ರಾಫಿಕ್ ಸಮಸ್ಯೆ ಉಂಟಾಗಿ ಜನರಿಗೆ ತೊಂದರೆಯುಂಟಾಗಲಿದೆ. ಈ ಹಿನ್ನೆಲೆಯಲ್ಲಿ ಕಾಲ್ನಡಿಗೆ ಜಾಥ ಕೈಗೊಳ್ಳುವಂತೆ ಬಿಜೆಪಿ ನಿಯೋಗಕ್ಕೆ ಮನವಿ ಮಾಡಿದೆ. ನಾವೂ ಸಹ ಬಳ್ಳಾರಿಗೆ ಕಾಲ್ನಡಿಗೆಯಲ್ಲೇ ಪಾದಯಾತ್ರೆ ಮಾಡಿದ್ದೆವು. ಆದರೆ ಬಿಜೆಪಿ ಪಕಷದವರು ನಮ್ಮ ಮನವಿಯನ್ನು ಒಪ್ಪಿಲ್ಲ ಎಂದು ಸಚಿವರು ತಿಳಿಸಿದ್ದಾರೆ. 
ಮಂಗಳೂರು ಚಲೋ, ಬೈಕ್ ರ‍್ಯಾಲಿಗೆ ಅನುಮತಿ ನೀಡುವುದರ ಬಗ್ಗೆ ಎಸ್ ಪಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT