ಕೆಂಪೇಗೌಡ ಜಯಂತಿ ಆಚರಣೆ ಪ್ರಯುಕ್ತ ಮುಖ್ಯ ರಸ್ತೆಯಲ್ಲಿ ನಿರ್ಮಾಣಗೊಂಡ ವೇದಿಕೆ 
ರಾಜ್ಯ

ಜ್ಞಾನ ಭಾರತಿ ಪ್ರವೇಶ ದ್ವಾರ ಬಂದ್ ; ಪ್ರಯಾಣಿಕರಿಗೆ ಕಿರಿಕಿರಿ

ಇದೇ ಶನಿವಾರ ಕೆಂಪೇಗೌಡ ಜಯಂತಿ ಆಚರಣೆಯಿರುವುದರಿಂದ ಮೈಸೂರು ರಸ್ತೆಯಿಂದ....

ಬೆಂಗಳೂರು: ಇದೇ ಶನಿವಾರ ಕೆಂಪೇಗೌಡ ಜಯಂತಿ ಆಚರಣೆಯಿರುವುದರಿಂದ ಮೈಸೂರು ರಸ್ತೆಯಿಂದ ಮಲ್ಲತಹಳ್ಳಿಗೆ ಸಂಪರ್ಕಿಸುವ ಜ್ಞಾನಭಾರತಿ ಕ್ಯಾಂಪಸ್ ನ  ಒಂದು ಕಡೆಯ ಪ್ರವೇಶವನ್ನು  ಬೆಂಗಳೂರು ವಿಶ್ವವಿದ್ಯಾಲಯ ಕೆಲ ದಿನಗಳ ಮಟ್ಟಿಗೆ ಮುಚ್ಚಿದೆ. ಈ ಮಾರ್ಗದ ಮೂಲಕ ನಿತ್ಯ ಹೋಗುತ್ತಿದ್ದ ಪ್ರಯಾಣಿಕರಿಗೆ ಇದರಿಂದ ಅನನುಕೂಲವಾಗಿದೆ. ಬೇರೆ ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಕೆಂಪೇಗೌಡ ಅಧ್ಯಯನ ಕೇಂದ್ರ ಇದೇ ಶನಿವಾರ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿದ್ದು ಅಲ್ಲಿ ಸುಮಾರು 6,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಜೆಬಿ ಪೊಲೀಸ್ ಠಾಣೆಯ ಹತ್ತಿರ ಜ್ಞಾನ ಭಾರತಿ ಕ್ಯಾಂಪಸ್ ನ ಮಾರ್ಗ ಮಧ್ಯೆ ಕಾರ್ಯಕ್ರಮದ ವೇದಿಕೆ ನಿರ್ಮಿಸಲಿದ್ದಾರೆ. ಇದಕ್ಕಾಗಿ ಈ ಮಾರ್ಗವನ್ನು ಮುಚ್ಚಲಾಗಿದೆ.
ಈ ಬಗ್ಗೆ ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು, ಅಷ್ಟು ದೊಡ್ಡ ವೇದಿಕೆ ನಿರ್ಮಿಸಲು ನಮಗೆ ಕನಿಷ್ಟವೆಂದರೂ 2 ದಿನಗಳು ಬೇಕು. ಹೀಗಾಗಿ ನಾವು ರಸ್ತೆಯ ಪ್ರವೇಶವನ್ನು ಮುಚ್ಚಿದ್ದೇವೆ ಎನ್ನುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT