ಕೆಂಪೇಗೌಡ ಜಯಂತಿ ಆಚರಣೆ ಪ್ರಯುಕ್ತ ಮುಖ್ಯ ರಸ್ತೆಯಲ್ಲಿ ನಿರ್ಮಾಣಗೊಂಡ ವೇದಿಕೆ 
ರಾಜ್ಯ

ಜ್ಞಾನ ಭಾರತಿ ಪ್ರವೇಶ ದ್ವಾರ ಬಂದ್ ; ಪ್ರಯಾಣಿಕರಿಗೆ ಕಿರಿಕಿರಿ

ಇದೇ ಶನಿವಾರ ಕೆಂಪೇಗೌಡ ಜಯಂತಿ ಆಚರಣೆಯಿರುವುದರಿಂದ ಮೈಸೂರು ರಸ್ತೆಯಿಂದ....

ಬೆಂಗಳೂರು: ಇದೇ ಶನಿವಾರ ಕೆಂಪೇಗೌಡ ಜಯಂತಿ ಆಚರಣೆಯಿರುವುದರಿಂದ ಮೈಸೂರು ರಸ್ತೆಯಿಂದ ಮಲ್ಲತಹಳ್ಳಿಗೆ ಸಂಪರ್ಕಿಸುವ ಜ್ಞಾನಭಾರತಿ ಕ್ಯಾಂಪಸ್ ನ  ಒಂದು ಕಡೆಯ ಪ್ರವೇಶವನ್ನು  ಬೆಂಗಳೂರು ವಿಶ್ವವಿದ್ಯಾಲಯ ಕೆಲ ದಿನಗಳ ಮಟ್ಟಿಗೆ ಮುಚ್ಚಿದೆ. ಈ ಮಾರ್ಗದ ಮೂಲಕ ನಿತ್ಯ ಹೋಗುತ್ತಿದ್ದ ಪ್ರಯಾಣಿಕರಿಗೆ ಇದರಿಂದ ಅನನುಕೂಲವಾಗಿದೆ. ಬೇರೆ ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಕೆಂಪೇಗೌಡ ಅಧ್ಯಯನ ಕೇಂದ್ರ ಇದೇ ಶನಿವಾರ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿದ್ದು ಅಲ್ಲಿ ಸುಮಾರು 6,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಜೆಬಿ ಪೊಲೀಸ್ ಠಾಣೆಯ ಹತ್ತಿರ ಜ್ಞಾನ ಭಾರತಿ ಕ್ಯಾಂಪಸ್ ನ ಮಾರ್ಗ ಮಧ್ಯೆ ಕಾರ್ಯಕ್ರಮದ ವೇದಿಕೆ ನಿರ್ಮಿಸಲಿದ್ದಾರೆ. ಇದಕ್ಕಾಗಿ ಈ ಮಾರ್ಗವನ್ನು ಮುಚ್ಚಲಾಗಿದೆ.
ಈ ಬಗ್ಗೆ ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು, ಅಷ್ಟು ದೊಡ್ಡ ವೇದಿಕೆ ನಿರ್ಮಿಸಲು ನಮಗೆ ಕನಿಷ್ಟವೆಂದರೂ 2 ದಿನಗಳು ಬೇಕು. ಹೀಗಾಗಿ ನಾವು ರಸ್ತೆಯ ಪ್ರವೇಶವನ್ನು ಮುಚ್ಚಿದ್ದೇವೆ ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT