ನಳಿನ್ ಕುಮಾರ್ ಕಟೀಲ್ 
ರಾಜ್ಯ

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರಕರಣ

ಬಿಜೆಪಿ ಯುವಮೋರ್ಚಾ ಮಂಗಳೂರು ಚಲೊ ಸಂದರ್ಭದಲ್ಲಿ ಬಂಧಿಸಿದ ಕಾರ್ಯಕರ್ತರ ಬಿಡುಗಡೆ ವಿಚಾರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಗಳೂರು: ಬಿಜೆಪಿ ಯುವಮೋರ್ಚಾ ಮಂಗಳೂರು ಚಲೊ ಸಂದರ್ಭದಲ್ಲಿ ಬಂಧಿಸಿದ ಕಾರ್ಯಕರ್ತರ ಬಿಡುಗಡೆ ವಿಚಾರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕದ್ರಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಮಾರುತಿ ನಾಯ್ಕ ಅವರೊಂದಿಗೆ ಒರಟಾಗಿ ವರ್ತಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. 
ಮಂಗಳೂರು ಚಲೋ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಲ್ಲಿ ಕೆಲವರನ್ನು ಬಂಧಿಸಿ ಕದ್ರಿಯ ಗೋರಕ್ಷನಾಥ ಸಭಾಂಗಣಕ್ಕೆ ಕರೆತಂದು ನಿಯಮಾವಳಿಯಂತೆ ಸಹಿ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಸಭಾಂಗಣಕ್ಕೆ ಆಗಮಿಸಿದ ಸಂಸದ ನಳಿನ್ ಕುಮಾರ್ ಕದ್ರಿ ಇನ್‌ಸ್ಪೆಕ್ಟರ್ ಮಾರುತಿ ನಾಯ್ಕ ಜತೆ ಒರಟಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. 
ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಬಂದ್ ಗೆ ಕರೆ ನೀಡುವುದಾಗಿ ಬೆದರಿಕೆ ಹಾಕಿದ್ದ ಕಾರಣ ಪೊಲೀಸರು ನಳಿನ್ ಮತ್ತಿತರರ ಮೇಲೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಶಿವಮೊಗ್ಗ: ನಡು ರಸ್ತೆಯಲ್ಲೇ ಕಬ್ಬಿಣದ ರಾಡ್ ನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, Video ವೈರಲ್ ಬಳಿಕ ಆರೋಪಿ ಬಂಧನ!