ನಳಿನ್ ಕುಮಾರ್ ಕಟೀಲ್ 
ರಾಜ್ಯ

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರಕರಣ

ಬಿಜೆಪಿ ಯುವಮೋರ್ಚಾ ಮಂಗಳೂರು ಚಲೊ ಸಂದರ್ಭದಲ್ಲಿ ಬಂಧಿಸಿದ ಕಾರ್ಯಕರ್ತರ ಬಿಡುಗಡೆ ವಿಚಾರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಗಳೂರು: ಬಿಜೆಪಿ ಯುವಮೋರ್ಚಾ ಮಂಗಳೂರು ಚಲೊ ಸಂದರ್ಭದಲ್ಲಿ ಬಂಧಿಸಿದ ಕಾರ್ಯಕರ್ತರ ಬಿಡುಗಡೆ ವಿಚಾರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕದ್ರಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಮಾರುತಿ ನಾಯ್ಕ ಅವರೊಂದಿಗೆ ಒರಟಾಗಿ ವರ್ತಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. 
ಮಂಗಳೂರು ಚಲೋ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಲ್ಲಿ ಕೆಲವರನ್ನು ಬಂಧಿಸಿ ಕದ್ರಿಯ ಗೋರಕ್ಷನಾಥ ಸಭಾಂಗಣಕ್ಕೆ ಕರೆತಂದು ನಿಯಮಾವಳಿಯಂತೆ ಸಹಿ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಸಭಾಂಗಣಕ್ಕೆ ಆಗಮಿಸಿದ ಸಂಸದ ನಳಿನ್ ಕುಮಾರ್ ಕದ್ರಿ ಇನ್‌ಸ್ಪೆಕ್ಟರ್ ಮಾರುತಿ ನಾಯ್ಕ ಜತೆ ಒರಟಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. 
ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಬಂದ್ ಗೆ ಕರೆ ನೀಡುವುದಾಗಿ ಬೆದರಿಕೆ ಹಾಕಿದ್ದ ಕಾರಣ ಪೊಲೀಸರು ನಳಿನ್ ಮತ್ತಿತರರ ಮೇಲೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಿ ಗ್ರೇಡ್ ಸಿನಿಮಾಗಿಂತ ಕಳಪೆ': ಪಾಕ್ ಸಂಪರ್ಕ ಆರೋಪಕ್ಕೆ ಗೊಗೋಯ್ ತಿರುಗೇಟು!

ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ, ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್!

ಮೆಟ್ರೋ ದರ ಏರಿಕೆ: 'Mr.CM, Cut the Drama': ತೇಜಸ್ವಿ ಸೂರ್ಯ ಗೆ ಪೊಲೀಸ್ ನೋಟಿಸ್!

ಟಿ20 ವಿಶ್ವಕಪ್ 2026: ಐರ್ಲೆಂಡ್ ವಿರುದ್ಧ ಶ್ರೀಲಂಕಾಗೆ 20 ರನ್ ಜಯ

ವೀರ್ ಸಾವರ್ಕರ್‌ಗೆ 'ಭಾರತ ರತ್ನ' ನೀಡಿದರೆ, ಪ್ರಶಸ್ತಿಯ ಘನತೆ ಮತ್ತಷ್ಟು ಹೆಚ್ಚುತ್ತದೆ: ಮೋಹನ್ ಭಾಗವತ್

SCROLL FOR NEXT