ಗೌರಿ ಲಂಕೇಶ್ 
ರಾಜ್ಯ

ಮುಂದುವರಿದ ಎಸ್ ಐಟಿ ತನಿಖೆ: ಹತ್ಯೆಯಾಗಿ 2 ದಿನ ಕಳೆದರೂ ಇನ್ನೂ ಸಿಕ್ಕಿಲ್ಲ ಹಂತಕನ ಸುಳಿವು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಎರಡು ದಿನಕಳೆದರೂ ಪೊಲೀಸರಿಗಾಗಲಿ ಅಥವಾ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕಾಗಲೀ ಹಂತಕನ ...

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಎರಡು ದಿನಕಳೆದರೂ ಪೊಲೀಸರಿಗಾಗಲಿ ಅಥವಾ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕಾಗಲೀ ಹಂತಕನ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ.
ಐಜಿಪಿ ಬಿ.ಕೆ ಸಿಂಗ್ ನೇತೃತ್ವದ ತಂಡ, ಗುರುವಾರ ರಾಜ ರಾಜೇಶ್ವರಿ ನಗರದ ಗೌರಿ ಲಂಕೇಶ್ ನಿವಾಸಕ್ಕೆ ತೆರಳಿ ಮಾಹಿತಿ ಕಲೆ ಹಾಕಿದೆ. ಹತ್ಯೆಯ ಹಿಂದಿನ ಉದ್ದೇಶವೇನು, ಯಾರು ಕೃತ್ಯ ಎಸಗಿದ್ದಾರೆ ಎಂಬ ಬಗ್ಗೆ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಕ್ಕಿಲ್ಲ,
ತನಿಖೆಗೆ ಆಧಾರವಾಗಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳಿಂದ ಕೂಡ ಯಾವುದೇ ಪ್ರಯೋಜನವಾಗಿಲ್ಲ,ವ್ಯಕ್ತಿಯೊಬ್ಬ ಕಪ್ಪು ಬಣ್ಣದ ಜಾಕೆಟ್ ಮತ್ತು ಹೆಲ್ಮೆಟ್ ಧರಿಸಿ ಆಕೆಗೆ ಶೂಟ್ ಮಾಡಿದ್ದಾನೆ. ಆದರೆ ದೃಶ್ಯಾವಳಿಯಲ್ಲಿ ಆತನ ಮುಖ, ಯಾವ ವಾಹನದಲ್ಲಿ ಬಂದಿದ್ದಾನೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಹೀಗಾಗಿ ಬೇರೆ ಬೇರೆ ಸ್ಥಳಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು  ಕೂಡ ಸಂಗ್ರಹಿಸಲಾಗಿದೆ.
ಈ ಪ್ರಕರಣ ಬಹು ದೊಡ್ಡ ಸವಾಲಾಗಿದೆ, ಹತ್ಯೆಯಲ್ಲಿ ಎಷ್ಟು ಮಂದಿ ಭಾಗವಹಿಸಿದ್ದರು ಎಂಬುದರ ಬಗ್ಗೆ ಖಚಿತ ಮಾಹಿತಿಯಿಲ್ಲ,  ಖಾಲಿಯಾಗಿರುವ ಕಾಟ್ರಿಜ್ಡ್ ಬಿಟ್ಟರೆ ಹತ್ಯೆ ನಡೆದ ಸ್ಥಳದಲ್ಲಿ ತನಿಖೆಗೆ ಸಹಾಯವಾಗುವ ಯಾವುದೇ ಮಾಹಿತಿ ಸಿಕ್ಕಿಲ್ಲ. ಕಲ್ಬುರ್ಗಿ ಪ್ರಕರಣಕ್ಕಿಂತ ಮತ್ತಷ್ಟು ಜಟಿಲವಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ. 
ಗೌರಿ ಲಂಕೇಶ್ ಅವರ ನಿವಾಸದಿಂದ ಡೈರಿ ಮತ್ತು ಲ್ಯಾಪ್ ಟಾಪ್ ಹಾಗೂ ಮೊಬೈಲ್ ಕರೆಗಳನ್ನು ಪರಿಶೀಲಿಸಲಾಗುತ್ತಿದೆ,.ತುಂಬಾ ಹತ್ತಿರದಿಂದ ಶೂಟ್ ಮಾಡಿದ ಪರಿಣಾಮ ಗೌರಿ ಅವರ ದೇಹದಲ್ಲಿ ನಾಲ್ಕು ಗುಂಡುಗಳು ಹೊಕ್ಕಿದ್ದವು ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿದು ಬಂದಿದೆ. ಬುಲೆಟ್ ನಿಂದಾದ ಗಾಯದಿಂದಾಗಿ ಆಕೆಯ ಹೃದಯಕ್ಕೆ ಹಾನಿಯಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಒಂದು ಗುಂಡು ಮಿಸ್ ಆಗಿ ಗೋಡೆಗೆ ತಗುಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT