ಸಂಗ್ರಹ ಚಿತ್ರ 
ರಾಜ್ಯ

ಮಹಾಮಳೆಗೆ ರಾಜ್ಯಾದ್ಯಂತ 10 ಮಂದಿ ಬಲಿ, ಕಲಬುರ್ಗಿಯಲ್ಲಿ ದಾಖಲೆಯ 19 ಸೆಂ.ಮೀ ಮಳೆ!

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮಹಾಮಳೆಗೆ ರಾಜ್ಯದಲ್ಲಿ 10 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮಹಾಮಳೆಗೆ ರಾಜ್ಯದಲ್ಲಿ 10 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯ ವರದಿಗಳ ಅನ್ವಯ ಮಳೆಯಿಂದಾಗಿ ಶುಕ್ರವಾರ ಒಂದೇ ದಿನ 10 ಮಂದಿ ಬಲಿಯಾಗಿದ್ದಾರೆ. ವಿಜಯಪುರದ ಇಂಡಿ ಹಾಗೂ ಜೇವೂರಿನಲ್ಲಿ ಮನೆಯ ಗೋಡೆ ಕುಸಿದಿದ್ದರಿಂದ ರಾಚಪ್ಪ ಗಣಪತಿ ಸುತಾರ (61), ಸಿದ್ದವ್ವ ರಾಚಪ್ಪ ಸುತಾರ (55) ಹಾಗೂ ಜೇವೂರಿನ ಕರಬಸಪ್ಪ ಪೀರಪ್ಪ ಆಕಳವಾಡಿ (65), ಇಂದ್ರಾಬಾಯಿ ಕರಬಸಪ್ಪ ಆಕಳವಾಡಿ (60) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ನಿಂಬಲಗುಂದಿಯಲ್ಲಿ ಸಿಡಿಲು ಬಡಿದು ಕುರಿಗಾಹಿ ಶೇಖರಪ್ಪ ಭೀಮಪ್ಪ ಸುಂಕದ (35) ಅಸುನೀಗಿದ್ದಾರೆ ಎಂದು ವರದಿಯಾಗಿದೆ.
ಕಲಬುರ್ಗಿ ತಾಲ್ಲೂಕಿನ ಸಣ್ಣೂರಿನಲ್ಲಿ ಅತೀ ಹೆಚ್ಚು ಅಂದರೆ 19 ಸೆಂ.ಮೀ ಮಳೆಯಾಗಿದ್ದು, ಜೇವರ್ಗಿ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿಗೆ ತೆರಳುವ ರಸ್ತೆ ಮಧ್ಯದಲ್ಲಿನ ಸೇತುವೆ ಕೊಚ್ಚಿಕೊಂಡು ಹೋಗಿದೆ. ಯಾದಗಿರಿ  ತಾಲ್ಲೂಕಿನ ಬಾಚವಾರದಲ್ಲಿ ಸಿಡಿಲು ಬಡಿದು 7 ಮೇಕೆಗಳು ಮೃತಪಟ್ಟಿವೆ. ಬಳಿಚಕ್ರ, ಹತ್ತಿಕುಣಿ ಹೋಬಳಿಯಲ್ಲಿ 30 ಮನೆಗಳು ಕುಸಿದಿವೆ ಎಂದು ವರದಿಯಾಗಿದೆ. ಇದಲ್ಲದೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತ್ತು ಯಲಬುರ್ಗಾ ತಾಲ್ಲೂಕಿನಲ್ಲಿ ಭಾರಿ ಮಳೆಯಾಗಿದೆ. ಸಿಂಧನೂರು ರಸ್ತೆಯಲ್ಲಿ ಬರುವ ಎರೆಹಳ್ಳಕ್ಕೆ ಪ್ರವಾಹ ಉಂಟಾಗಿದ್ದರಿಂದ ಬಿಜಕಲ್ ಬಳಿಯ ರಾಜ್ಯ ಹೆದ್ದಾರಿ ಸೇತುವೆ ಮೇಲೆ ನೀರು ಹರಿದು ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.
ಇನ್ನು ಹಾಸನ ಜಿಲ್ಲೆ ಅರಸೀಕೆರೆ ನಗರದಲ್ಲಿ ಗುರುವಾರ ಸಂಜೆ ಭಾರಿ ಮಳೆ ಸುರಿದಿದ್ದು, ಹಲವು ಮನೆಗಳ ಗೋಡೆಗಳು ಕುಸಿದಿವೆ. 10 ವರ್ಷಗಳ ನಂತರ ಬಿದ್ದಿರುವ ದಾಖಲೆ ಮಳೆ ಇದಾಗಿದ್ದು, ನಗರದಲ್ಲಿ 97 ಮಿ.ಮೀ, ಬಾಣಾವರ 41  ಮಿ.ಮೀ, ಗಂಡಸಿ 65 ಮಿ.ಮೀ, ಯಳವಾರೆಯಲ್ಲಿ 98 ಮಿ.ಮೀ, ಕಣಕಟ್ಟೆಯಲ್ಲಿ 8.8 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಝಳಕಿಯಲ್ಲಿ 15.2 ಸೆಂ.ಮೀ, ಚಡಚಣ ಪಟ್ಟಣದಲ್ಲಿ 12.7 ಸೆಂ.ಮೀ. ಮಳೆ ದಾಖಲಾಗಿದೆ. ಎಂಟು ವರ್ಷಗಳ ಬಳಿಕ ಚಡಚಣದ ಬೋರಿಹಳ್ಳ ಮೈದುಂಬಿ ಹರಿಯುತ್ತಿದೆ. ಬರಡೋಲ ಗ್ರಾಮದಲ್ಲಿ 27 ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಜಿಗಜಿಣಗಿಯಲ್ಲೂ ಮನೆಗಳಿಗೆ ಹಾನಿಯಾಗಿದ್ದು, ಬಳ್ಳಾರಿ ಜಿಲ್ಲೆಯ ಕುರುಗೋಡಿನಲ್ಲಿ ಮನೆ ಗೋಡೆ ಕುಸಿದಿದೆ. ಕುರುಗೋಡು ಪಟ್ಟಣದಲ್ಲಿ 3.6 ಸೆಂ.ಮೀ ಮಳೆ ದಾಖಲಾಗಿದೆ. ಧಾರಾಕಾರ ಮಳೆಯಿಂದ ಈ ಭಾಗದ ಬಹುತೇಕ ಹಳ್ಳಕೊಳ್ಳಗಳು ತುಂಬಿವೆ. ಮದಿರೆ ಗ್ರಾಮದ ಬಳಿ ಹರಿಯುವ ಹಿರೇಹಳ್ಳ ತುಂಬಿ ಸೇತುವೆಯ ಮೇಲೆ ಹರಿದ ಪರಿಣಾಮ ಮದಿರೆ ಮತ್ತು ಕೋಳೂರು ನಡುವೆ ಸಂಚಾರಕ್ಕೆ ಅಡ್ಡಿಯಾಯಿತು. ಶಿವಮೊಗ್ಗ ನಗರ, ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ, ಚಿತ್ರದುರ್ಗ ನಗರ, ಚಿಕ್ಕಜಾಜೂರು, ದಾವಣಗೆರೆ ಜಿಲ್ಲೆ ಹರಪನಹಳ್ಳಿ ಹಾಗೂ ಸುತ್ತಮುತ್ತ ಶುಕ್ರವಾರ ಉತ್ತಮ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT