ಧರೆಗುರುಳಿದ ಮರಗಳು 
ರಾಜ್ಯ

ದಾಖಲೆ ಮಳೆಗೆ ಬೆಚ್ಚಿದ ಬೆಂಗಳೂರು: ಒಂದೇ ದಿನ 9 ಸೆ.ಮೀ ಮಳೆ!

ಶುಕ್ರವಾರ ಸಂಜೆ ಸುರಿದ ಭಾರಿ ಮಳೆ ರಾಜಧಾನಿ ಬೆಂಗಳೂರಿನ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದ್ದು, ಬೆಂಗಳೂರಿನ ಹೃದಯಭಾಗದಲ್ಲಿರುವ ವಿವಿಪುರಂ ಸಜ್ಜನರಾವ್ ಸರ್ಕಲ್ ನಲ್ಲಿ ಬರೊಬ್ಬರಿ 20 ಮರಗಳು ಧರೆಗುರಳಿವೆ.

ಬೆಂಗಳೂರು: ಶುಕ್ರವಾರ ಸಂಜೆ ಸುರಿದ ಭಾರಿ ಮಳೆ ರಾಜಧಾನಿ ಬೆಂಗಳೂರಿನ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದ್ದು, ಬೆಂಗಳೂರಿನ ಹೃದಯಭಾಗದಲ್ಲಿರುವ ವಿವಿಪುರಂ ಸಜ್ಜನರಾವ್ ಸರ್ಕಲ್ ನಲ್ಲಿ ಬರೊಬ್ಬರಿ 20 ಮರಗಳು ಧರೆಗುರಳಿವೆ.
ಹವಾಮಾನ ಇಲಾಖೆಯ ಮೂಲಗಳು ತಿಳಿಸಿರುವಂತೆ ಬೆಂಗಳೂರಿನಲ್ಲಿ ನಿನ್ನೆ ದಾಖಲೆಯ ಅಂದರೆ ಬರೊಬ್ಬರಿ 9 ಸೆಂ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ. ಪರಿಣಾಣ ಮೆಜೆಸ್ಟಿಕ್‌, ನೃಪತುಂಗ ರಸ್ತೆ, ಮೈಸೂರು ರಸ್ತೆ,  ತುಮಕೂರು ರಸ್ತೆಯಲ್ಲಿ ವಾಹನಗಳ ದಟ್ಟಣೆ ಕಂಡುಬಂದಿತ್ತು. ನಗರದಲ್ಲಿ ಸರಾಸರಿ 3 ಮಿ.ಮೀ ಮಳೆಯಾಗಿದ್ದು, ಸಂಪಂಗಿರಾಮನಗರ 17.5 ಮಿ.ಮೀ, ಆನೇಕಲ್‌ 11 ಮಿ.ಮೀ, ರಾಜಾಜಿನಗರ 19 ಮಿ.ಮೀ ಮಳೆ ಸುರಿದಿದೆ ಎಂದು  ಹವಾಮಾನ ಇಲಾಖೆಯ ಅಧಿಕಾರಿ ತಿಳಿಸಿದರು.
ಸಜ್ಜನರಾವ್ ಸರ್ಕಲ್ ನಲ್ಲಿದ್ದ ಸಾಲು ಸಾಲು ಮರಗಳು ಧರೆಗೆ
ನಿನ್ನೆ ಸುರಿದ ಭಾರಿ ಮಳೆಗೆ ಸಜ್ಜನ್ ರಾವ್ ವೃತ್ತದಲ್ಲಿದ್ದ ಸುಮಾರು 20 ಮರಗಳು ಧರೆಗುರುಳಿವೆ. ಪರಿಣಾಮ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ 25ಕ್ಕೂ ಅಧಿಕ ಕಾರು ಮತ್ತು ಬೈಕ್ ಗಳು ಜಖಂಗೊಂಡಿವೆ. ಇದಲ್ಲದೆ ಬಸವನಗುಡಿಯ  ಬಿಪಿವಾಡಿಯಾ ರಸ್ತೆಯಲ್ಲಿ 3 ಮರಗಳು ಧರೆಗುರುಳಿದ್ದು, ಹಲವು ಹಳೆಯ ಮರಗಳು ಧರೆಗುರುಳುವ ಹಂತದಲ್ಲಿವೆ. ಹೀಗಾಗಿ ಈ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ.
ಮರಗಳ ತೆರವಿಗೆ 21 ತಂಡ ರಚನೆ: ಮೇಯರ್ ಪದ್ಮಾವತಿ
ಇನ್ನು ಧರೆಗುರುಳಿದ ಮರಗಳನ್ನು ತೆರವುಗೊಳಿಸಲು 21 ತಂಡಗಳನ್ನು ರಚಿಸಿರುವುದಾಗಿ ಬೆಂಗಳೂರು ಮೇಯರ್ ಜಿ ಪದ್ಮಾವತಿ ಅವರು ತಿಳಿಸಿದ್ದಾರೆ. ಬೆಂಗಳೂರಿನಾದ್ಯಂತ ಮಳೆಯಿಂದಾಗಿ ಮರಗಳು ಧರೆಗುರುಳಿದ್ದು,  ಮರಗಳನ್ನು ತೆರವುಗೊಳಿಸಲು ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಅಂತೆಯೇ ಹಲವು ವಿದ್ಯುತ್ ಕಂಬಗಳೂ ಕೂಡ ಧರೆಗುರುಳಿದ್ದು, ಇವುಗಳ ತೆರವು ಕಾರ್ಯ ಬೆಸ್ಕಾಂಗೆ ಸೇರಿದ್ದು, ಆದರೂ ಬೆಸ್ಕಾಂ ಅಧಿಕಾರಿಗಳಿಗೆ  ಕಂಬ ತೆರವುಗೊಳಿಸುವಂತೆ ಸೂಚಿಸಿದ್ದೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT