ಧರೆಗುರುಳಿದ ಮರಗಳು 
ರಾಜ್ಯ

ದಾಖಲೆ ಮಳೆಗೆ ಬೆಚ್ಚಿದ ಬೆಂಗಳೂರು: ಒಂದೇ ದಿನ 9 ಸೆ.ಮೀ ಮಳೆ!

ಶುಕ್ರವಾರ ಸಂಜೆ ಸುರಿದ ಭಾರಿ ಮಳೆ ರಾಜಧಾನಿ ಬೆಂಗಳೂರಿನ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದ್ದು, ಬೆಂಗಳೂರಿನ ಹೃದಯಭಾಗದಲ್ಲಿರುವ ವಿವಿಪುರಂ ಸಜ್ಜನರಾವ್ ಸರ್ಕಲ್ ನಲ್ಲಿ ಬರೊಬ್ಬರಿ 20 ಮರಗಳು ಧರೆಗುರಳಿವೆ.

ಬೆಂಗಳೂರು: ಶುಕ್ರವಾರ ಸಂಜೆ ಸುರಿದ ಭಾರಿ ಮಳೆ ರಾಜಧಾನಿ ಬೆಂಗಳೂರಿನ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದ್ದು, ಬೆಂಗಳೂರಿನ ಹೃದಯಭಾಗದಲ್ಲಿರುವ ವಿವಿಪುರಂ ಸಜ್ಜನರಾವ್ ಸರ್ಕಲ್ ನಲ್ಲಿ ಬರೊಬ್ಬರಿ 20 ಮರಗಳು ಧರೆಗುರಳಿವೆ.
ಹವಾಮಾನ ಇಲಾಖೆಯ ಮೂಲಗಳು ತಿಳಿಸಿರುವಂತೆ ಬೆಂಗಳೂರಿನಲ್ಲಿ ನಿನ್ನೆ ದಾಖಲೆಯ ಅಂದರೆ ಬರೊಬ್ಬರಿ 9 ಸೆಂ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ. ಪರಿಣಾಣ ಮೆಜೆಸ್ಟಿಕ್‌, ನೃಪತುಂಗ ರಸ್ತೆ, ಮೈಸೂರು ರಸ್ತೆ,  ತುಮಕೂರು ರಸ್ತೆಯಲ್ಲಿ ವಾಹನಗಳ ದಟ್ಟಣೆ ಕಂಡುಬಂದಿತ್ತು. ನಗರದಲ್ಲಿ ಸರಾಸರಿ 3 ಮಿ.ಮೀ ಮಳೆಯಾಗಿದ್ದು, ಸಂಪಂಗಿರಾಮನಗರ 17.5 ಮಿ.ಮೀ, ಆನೇಕಲ್‌ 11 ಮಿ.ಮೀ, ರಾಜಾಜಿನಗರ 19 ಮಿ.ಮೀ ಮಳೆ ಸುರಿದಿದೆ ಎಂದು  ಹವಾಮಾನ ಇಲಾಖೆಯ ಅಧಿಕಾರಿ ತಿಳಿಸಿದರು.
ಸಜ್ಜನರಾವ್ ಸರ್ಕಲ್ ನಲ್ಲಿದ್ದ ಸಾಲು ಸಾಲು ಮರಗಳು ಧರೆಗೆ
ನಿನ್ನೆ ಸುರಿದ ಭಾರಿ ಮಳೆಗೆ ಸಜ್ಜನ್ ರಾವ್ ವೃತ್ತದಲ್ಲಿದ್ದ ಸುಮಾರು 20 ಮರಗಳು ಧರೆಗುರುಳಿವೆ. ಪರಿಣಾಮ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ 25ಕ್ಕೂ ಅಧಿಕ ಕಾರು ಮತ್ತು ಬೈಕ್ ಗಳು ಜಖಂಗೊಂಡಿವೆ. ಇದಲ್ಲದೆ ಬಸವನಗುಡಿಯ  ಬಿಪಿವಾಡಿಯಾ ರಸ್ತೆಯಲ್ಲಿ 3 ಮರಗಳು ಧರೆಗುರುಳಿದ್ದು, ಹಲವು ಹಳೆಯ ಮರಗಳು ಧರೆಗುರುಳುವ ಹಂತದಲ್ಲಿವೆ. ಹೀಗಾಗಿ ಈ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ.
ಮರಗಳ ತೆರವಿಗೆ 21 ತಂಡ ರಚನೆ: ಮೇಯರ್ ಪದ್ಮಾವತಿ
ಇನ್ನು ಧರೆಗುರುಳಿದ ಮರಗಳನ್ನು ತೆರವುಗೊಳಿಸಲು 21 ತಂಡಗಳನ್ನು ರಚಿಸಿರುವುದಾಗಿ ಬೆಂಗಳೂರು ಮೇಯರ್ ಜಿ ಪದ್ಮಾವತಿ ಅವರು ತಿಳಿಸಿದ್ದಾರೆ. ಬೆಂಗಳೂರಿನಾದ್ಯಂತ ಮಳೆಯಿಂದಾಗಿ ಮರಗಳು ಧರೆಗುರುಳಿದ್ದು,  ಮರಗಳನ್ನು ತೆರವುಗೊಳಿಸಲು ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಅಂತೆಯೇ ಹಲವು ವಿದ್ಯುತ್ ಕಂಬಗಳೂ ಕೂಡ ಧರೆಗುರುಳಿದ್ದು, ಇವುಗಳ ತೆರವು ಕಾರ್ಯ ಬೆಸ್ಕಾಂಗೆ ಸೇರಿದ್ದು, ಆದರೂ ಬೆಸ್ಕಾಂ ಅಧಿಕಾರಿಗಳಿಗೆ  ಕಂಬ ತೆರವುಗೊಳಿಸುವಂತೆ ಸೂಚಿಸಿದ್ದೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT