ಪಾಯಸ ಸವಿಯುತ್ತಿರುವ ಅತಿಥಿಗಳು 
ರಾಜ್ಯ

ಬಂಟ್ವಾಳ: ಮಸೀದಿ ಉದ್ಘಾಟನೆಗೆ ಪಾಯಸ ನೀಡಿ ಸಾಮರಸ್ಯ ಮೆರೆದ ಹಿಂದೂ ಕುಟುಂಬ

ದಕ್ಷಿಣ ಕನ್ನಡ ಜಿಲ್ಲೆ ಕಳೆದ ಕೆಲವು ವಾರಗಳಿಂದ ಕೋಮು ಗಲಭೆಯಿಂದ ತತ್ತರಿಸಿ ಹೋಗಿತ್ತು. ಆದರೆ ಭಾನುವಾರ ಜಿಲ್ಲೆಯ ಬಂಟ್ವಾಳ ತಾಲೂಕಿನ....

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಳೆದ ಕೆಲವು ವಾರಗಳಿಂದ ಕೋಮು ಗಲಭೆಯಿಂದ ತತ್ತರಿಸಿ ಹೋಗಿತ್ತು. ಆದರೆ ಭಾನುವಾರ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಂಪನಮಜಲುನಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ಅರಫಾ ಜುಮಾ ಮಸೀದಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿಂದೂ-ಮುಸ್ಲಿಮರು ಒಟ್ಟಾಗಿ ಒಂದೇ ವೇದಿಕೆಯಲ್ಲಿ ಭಾಗವಹಿಸುವ ಮೂಲಕ ಸಾಮರಸ್ಯ ಮೆರೆದಿದ್ದಾರೆ. 
ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಮಾರು 1,500 ಕುಟುಂಬಕ್ಕೆ ಸೋಮಪ್ಪ ಆಳ್ವ ಹಾಗೂ ಅವರ ಪುತ್ರರಾದ ಆನಂದ್ ಆಳ್ವ ಮತ್ತು ವಿಠಲ್ ಆಳ್ವ ಅವರು ಪಾಯಸ ನೀಡುವ ಮೂಲಕ ಮುಸ್ಲಿಂ ಬಾಂಧವರ ಸಹೋದರತ್ವವನ್ನು ಎತ್ತಿಹಿಡಿದರು. 
ಸೋಮಪ್ಪ ಅವರು ಮಸೀದಿಯ ಸಮೀಪದಲ್ಲೇ ಕೇಟರಿಂಗ್ ವ್ಯಾಪಾರ ಮಾಡುತ್ತಿದ್ದು, ಮಸೀದಿ ಉದ್ಘಾಟನೆ ವೇಳೆ ಸ್ವಯಂ ಪ್ರೇರಣೆಯಿಂದ ಎಲ್ಲರಿಗೂ ಪಾಯಸ ನೀಡಿದ್ದಾರೆ. ಮಸೀದಿ ಉದ್ಘಾಟನೆ ದಿನದಂದು ಯಾವ ಸಿಹಿ ತಿನಿಸು ನೀಡಬೇಕು ಎಂದು ನನ್ನನ್ನು ಕೇಳಿದ್ದರು. ನಾನು ಅವರಿಗೆ ಜನ ಪಾಯಸ ಇಷ್ಟಪಡುತ್ತಾರೆ. ಹೀಗಾಗಿ ಅದನ್ನೇ ಕೊಡಿ ಎಂದು ಸೋಮಪ್ಪ ಅವರಿಗೆ ತಿಳಿಸಿದ್ದೆ ಎಂದು ಮಸೀದಿ ಅಧ್ಯಕ್ಷ ಆಸಿಫ್ ಇಖ್ಬಾಲ್ ಅವರು ಹೇಳಿದ್ದಾರೆ.
ಕುಂಪನಮಜಲು ಗ್ರಾಮದಿಂದ ಅಂದು ಸುಮಾರು 3 ಸಾವಿರ ಜನ ಮಸೀದಿಗೆ ಭೇಟಿ ನೀಡಿದ್ದಾರೆ. ಆ ಪೈಕಿ 1,500 ಜನ ಪಾಯಸ ಸವಿದಿದ್ದಾರೆ ಎಂದು ಆಸಿಫ್ ಇಖ್ಬಾಲ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT