ಖ್ಯಾತ ಕಲಾವಿದ ಎಂ.ಬಿ ಪಾಟೀಲ್ 
ರಾಜ್ಯ

ಖ್ಯಾತ ಕಲಾವಿದ ಎಂಬಿ ಪಾಟೀಲ್ ಇನ್ನಿಲ್ಲ

ಹಿರಿಯ ಕಲಾವಿದ ಎಂ.ಬಿ.ಪಾಟೀಲ ಇಂದು ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.

ಧಾರವಾಡ: ಹಿರಿಯ ಕಲಾವಿದ ಎಂ.ಬಿ.ಪಾಟೀಲ ಇಂದು ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.
ಮಲ್ಲಿಕಾರ್ಜುನಗೌಡ ಭೀಮನಗೌಡ ಪಾಟೀಲ  10 ಡಿಸೆಂಬರ್ 1939,ನಲ್ಲಿ ಬಿಜಾಪುರದ ತಿಕೋತಾ ಎನ್ನುವಲ್ಲಿ ಜನಿಸಿದರು. ನ್ಯೂಟನ್ ಕಲಾ ಮಂದಿರ, ಮುಂಬೈ ನಲ್ಲಿ 1960-1964 ರಲ್ಲಿ ಪದವಿ ಮುಗಿಸಿದ ಪಾಟೀಲರು ವಾರ್ತಾ ಇಲಾಖೆಯ ಮುಖ್ಯ ಕಲಾವಿದರಾಗಿ ನಿವೃಅತ್ತರಾಗಿದ್ದರು. ನಿವೃತ್ತಿಯ ನಂತರ  ಧಾರವಾಡದಲ್ಲಿ ನೆಲೆಸಿದ್ದರು. 
ಹುಬ್ಬಳ್ಳಿ, ಧಾರವಾಡ, ಗುಲ್ಬರ್ಗಾ, ಕಿತ್ತೂರು, ಬೆಂಗಳೂರಿನಲ್ಲಿ ಅವರು ಏಕವ್ಯಕ್ತಿ ಕಲಾ ಪ್ರದರ್ಶನಗಳನ್ನು ನೀಡಿದ್ದರು. ಮತ್ತು 1969 ರಿಂದ ಚೆನ್ನೈ, ಕೇರಳ, ಪಾಂಡಿಚೆರಿ, ಬೆಂಗಳೂರು ಮತ್ತು ಮಂಗಳೂರಿನಲ್ಲಿ ನಡೆದ ಆರ್ಟ್ ಕ್ಯಾಂಪ್ ಗಳಲ್ಲಿ ಸಹ ಪಾಲ್ಗೊಂಡಿದ್ದರು.
ರಾಜ್ಯೋತ್ಸವ ಪ್ರಶಸ್ತಿ, ಲಲಿತಕಲಾ ಅಕಾಡೆಮಿ, ಕೇಂದ್ರ ಹಾಗೂ ರಾಜ್ಯ ಚಿತ್ರಕಲಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಇವರಿಗೆ ಲಭಿಸಿದೆ.
ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿದ್ದ ಸ್ತಬ್ಧ ಚಿತ್ರವನ್ನು, ಸತತ ಒಂಬತ್ತು ವರ್ಷ ಎಂ.ಬಿ.ಪಾಟೀಲ ಅವರೇ ವಿನ್ಯಾಸ ಮಾಡಿದ್ದರು. ಅವರು ವಿನ್ಯಾಸಗೊಳಿಸಿದ ಸ್ತಬ್ಧಚಿತ್ರಗಳಿಗೆ ಎರಡು ಬಾರಿ ಪ್ರಥಮ ಹಾಗೂ ಮೂರು ಬಾರಿ ದ್ವಿತೀಯ ಬಹುಮಾನ ಲಭಿಸಿದೆ. 
ಹಲವು ಪೌರಾಣಿಕ ಚಲನಚಿತ್ರಗಳಲ್ಲಿ ವಿನ್ಯಾಸಕಾರರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT