ಖ್ಯಾತ ಕಲಾವಿದ ಎಂ.ಬಿ ಪಾಟೀಲ್ 
ರಾಜ್ಯ

ಖ್ಯಾತ ಕಲಾವಿದ ಎಂಬಿ ಪಾಟೀಲ್ ಇನ್ನಿಲ್ಲ

ಹಿರಿಯ ಕಲಾವಿದ ಎಂ.ಬಿ.ಪಾಟೀಲ ಇಂದು ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.

ಧಾರವಾಡ: ಹಿರಿಯ ಕಲಾವಿದ ಎಂ.ಬಿ.ಪಾಟೀಲ ಇಂದು ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.
ಮಲ್ಲಿಕಾರ್ಜುನಗೌಡ ಭೀಮನಗೌಡ ಪಾಟೀಲ  10 ಡಿಸೆಂಬರ್ 1939,ನಲ್ಲಿ ಬಿಜಾಪುರದ ತಿಕೋತಾ ಎನ್ನುವಲ್ಲಿ ಜನಿಸಿದರು. ನ್ಯೂಟನ್ ಕಲಾ ಮಂದಿರ, ಮುಂಬೈ ನಲ್ಲಿ 1960-1964 ರಲ್ಲಿ ಪದವಿ ಮುಗಿಸಿದ ಪಾಟೀಲರು ವಾರ್ತಾ ಇಲಾಖೆಯ ಮುಖ್ಯ ಕಲಾವಿದರಾಗಿ ನಿವೃಅತ್ತರಾಗಿದ್ದರು. ನಿವೃತ್ತಿಯ ನಂತರ  ಧಾರವಾಡದಲ್ಲಿ ನೆಲೆಸಿದ್ದರು. 
ಹುಬ್ಬಳ್ಳಿ, ಧಾರವಾಡ, ಗುಲ್ಬರ್ಗಾ, ಕಿತ್ತೂರು, ಬೆಂಗಳೂರಿನಲ್ಲಿ ಅವರು ಏಕವ್ಯಕ್ತಿ ಕಲಾ ಪ್ರದರ್ಶನಗಳನ್ನು ನೀಡಿದ್ದರು. ಮತ್ತು 1969 ರಿಂದ ಚೆನ್ನೈ, ಕೇರಳ, ಪಾಂಡಿಚೆರಿ, ಬೆಂಗಳೂರು ಮತ್ತು ಮಂಗಳೂರಿನಲ್ಲಿ ನಡೆದ ಆರ್ಟ್ ಕ್ಯಾಂಪ್ ಗಳಲ್ಲಿ ಸಹ ಪಾಲ್ಗೊಂಡಿದ್ದರು.
ರಾಜ್ಯೋತ್ಸವ ಪ್ರಶಸ್ತಿ, ಲಲಿತಕಲಾ ಅಕಾಡೆಮಿ, ಕೇಂದ್ರ ಹಾಗೂ ರಾಜ್ಯ ಚಿತ್ರಕಲಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಇವರಿಗೆ ಲಭಿಸಿದೆ.
ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿದ್ದ ಸ್ತಬ್ಧ ಚಿತ್ರವನ್ನು, ಸತತ ಒಂಬತ್ತು ವರ್ಷ ಎಂ.ಬಿ.ಪಾಟೀಲ ಅವರೇ ವಿನ್ಯಾಸ ಮಾಡಿದ್ದರು. ಅವರು ವಿನ್ಯಾಸಗೊಳಿಸಿದ ಸ್ತಬ್ಧಚಿತ್ರಗಳಿಗೆ ಎರಡು ಬಾರಿ ಪ್ರಥಮ ಹಾಗೂ ಮೂರು ಬಾರಿ ದ್ವಿತೀಯ ಬಹುಮಾನ ಲಭಿಸಿದೆ. 
ಹಲವು ಪೌರಾಣಿಕ ಚಲನಚಿತ್ರಗಳಲ್ಲಿ ವಿನ್ಯಾಸಕಾರರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್