ಖ್ಯಾತ ಕಲಾವಿದ ಎಂ.ಬಿ ಪಾಟೀಲ್ 
ರಾಜ್ಯ

ಖ್ಯಾತ ಕಲಾವಿದ ಎಂಬಿ ಪಾಟೀಲ್ ಇನ್ನಿಲ್ಲ

ಹಿರಿಯ ಕಲಾವಿದ ಎಂ.ಬಿ.ಪಾಟೀಲ ಇಂದು ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.

ಧಾರವಾಡ: ಹಿರಿಯ ಕಲಾವಿದ ಎಂ.ಬಿ.ಪಾಟೀಲ ಇಂದು ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.
ಮಲ್ಲಿಕಾರ್ಜುನಗೌಡ ಭೀಮನಗೌಡ ಪಾಟೀಲ  10 ಡಿಸೆಂಬರ್ 1939,ನಲ್ಲಿ ಬಿಜಾಪುರದ ತಿಕೋತಾ ಎನ್ನುವಲ್ಲಿ ಜನಿಸಿದರು. ನ್ಯೂಟನ್ ಕಲಾ ಮಂದಿರ, ಮುಂಬೈ ನಲ್ಲಿ 1960-1964 ರಲ್ಲಿ ಪದವಿ ಮುಗಿಸಿದ ಪಾಟೀಲರು ವಾರ್ತಾ ಇಲಾಖೆಯ ಮುಖ್ಯ ಕಲಾವಿದರಾಗಿ ನಿವೃಅತ್ತರಾಗಿದ್ದರು. ನಿವೃತ್ತಿಯ ನಂತರ  ಧಾರವಾಡದಲ್ಲಿ ನೆಲೆಸಿದ್ದರು. 
ಹುಬ್ಬಳ್ಳಿ, ಧಾರವಾಡ, ಗುಲ್ಬರ್ಗಾ, ಕಿತ್ತೂರು, ಬೆಂಗಳೂರಿನಲ್ಲಿ ಅವರು ಏಕವ್ಯಕ್ತಿ ಕಲಾ ಪ್ರದರ್ಶನಗಳನ್ನು ನೀಡಿದ್ದರು. ಮತ್ತು 1969 ರಿಂದ ಚೆನ್ನೈ, ಕೇರಳ, ಪಾಂಡಿಚೆರಿ, ಬೆಂಗಳೂರು ಮತ್ತು ಮಂಗಳೂರಿನಲ್ಲಿ ನಡೆದ ಆರ್ಟ್ ಕ್ಯಾಂಪ್ ಗಳಲ್ಲಿ ಸಹ ಪಾಲ್ಗೊಂಡಿದ್ದರು.
ರಾಜ್ಯೋತ್ಸವ ಪ್ರಶಸ್ತಿ, ಲಲಿತಕಲಾ ಅಕಾಡೆಮಿ, ಕೇಂದ್ರ ಹಾಗೂ ರಾಜ್ಯ ಚಿತ್ರಕಲಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಇವರಿಗೆ ಲಭಿಸಿದೆ.
ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿದ್ದ ಸ್ತಬ್ಧ ಚಿತ್ರವನ್ನು, ಸತತ ಒಂಬತ್ತು ವರ್ಷ ಎಂ.ಬಿ.ಪಾಟೀಲ ಅವರೇ ವಿನ್ಯಾಸ ಮಾಡಿದ್ದರು. ಅವರು ವಿನ್ಯಾಸಗೊಳಿಸಿದ ಸ್ತಬ್ಧಚಿತ್ರಗಳಿಗೆ ಎರಡು ಬಾರಿ ಪ್ರಥಮ ಹಾಗೂ ಮೂರು ಬಾರಿ ದ್ವಿತೀಯ ಬಹುಮಾನ ಲಭಿಸಿದೆ. 
ಹಲವು ಪೌರಾಣಿಕ ಚಲನಚಿತ್ರಗಳಲ್ಲಿ ವಿನ್ಯಾಸಕಾರರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT