ಕೆಜೆ ಜಾರ್ಜ್ 
ರಾಜ್ಯ

ರಾಜೀನಾಮೆಗೆ ನಗರಾಭಿವೃದ್ಧಿ ಸಚಿವ ಜಾರ್ಜ್ ನಕಾರ: ತಾಳ್ಮೆಯಿಂದ ಇರಲು ಬಿಜೆಪಿಗೆ ಸಲಹೆ

ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ. ಆದರೆ ರಾಜೀನಾಮೆ ನೀಡಲು ಜಾರ್ಜ್ ನಿರಾಕರಿಸಿದ್ದಾರೆ.

ಬೆಂಗಳೂರು: ಡಿವೈಎಸ್ ಪಿ ಗಣಪತಿ ಸಾವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ವಹಿಸುತ್ತಿದ್ದಂತೆಯೇ, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ. ಆದರೆ ರಾಜೀನಾಮೆ ನೀಡಲು ಜಾರ್ಜ್ ನಿರಾಕರಿಸಿದ್ದಾರೆ. 
ಗಣಪತಿ ನಿಗೂಢ ಸಾವಿನ ಪ್ರಕರಣದಲ್ಲಿ ನಾನೇನು ತಪ್ಪು ಮಾಡಿಲ್ಲ. ಆದ್ದರಿಂದ ರಾಜೀನಾಮೆ ನೀಡುವ ಪ್ರಶ್ನೆಯೇ ಎದುರಾಗುವುದಿಲ್ಲ ಎಂದು ಜಾರ್ಜ್ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಜಾರ್ಜ್, ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಡೆಯನ್ನು ಟೀಕಿಸಿದ್ದಾರೆ. 
"ನನ್ನ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿಯವರು ಸ್ವಲ್ಪ ತಾಳ್ಮೆಯಿಂದ ಇದ್ದು ತನಿಖೆಯ ಫಲಿತಾಂಶ ಏನಾಗುತ್ತದೆ ಎಂಬುದನ್ನು ಕಾದು ನೋಡಲಿ" ಎಂದು ಜಾರ್ಜ್ ಬಿಜೆಪಿಗೆ ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT