ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 
ರಾಜ್ಯ

ಸಿದ್ದರಾಮಯ್ಯ ಸರ್ಕಾರ ಐದು ಪಟ್ಟು ಹೆಚ್ಚು ಭೂಮಿ ಡಿನೋಟಿಫೈ ಮಾಡಿದೆ: ಯಡಿಯೂರಪ್ಪ ಪರ ವಕೀಲ

ಡಾ.ಶಿವರಾಮ ಕಾರಂತ ಲೇ ಔಟ್ ಗೆಂದು 2014 ಮಾರ್ಚ್-ಏಪ್ರಿಲ್ ನಲ್ಲಿ ಪಡೆದಿದ್ದ 1,300 ಎಕರೆ...

ಬೆಂಗಳೂರು: ಡಾ.ಶಿವರಾಮ ಕಾರಂತ ಲೇ ಔಟ್ ಗೆಂದು 2014 ಮಾರ್ಚ್-ಏಪ್ರಿಲ್ ನಲ್ಲಿ ಪಡೆದಿದ್ದ 1,300 ಎಕರೆ ಭೂಮಿಯನ್ನು ಸಿದ್ದರಾಮಯ್ಯ ಸರ್ಕಾರ ಒಂದೇ ಬಾರಿಗೆ ಡಿನೋಟಿಫೈಡ್ ಮಾಡಿದೆ. ಇದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಲು ಶಿಫಾರಸು ಮಾಡಿದ ಭೂಮಿಗಿಂತ 5 ಪಟ್ಟು ಅಧಿಕವಾಗಿದೆ ಎಂದು ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ತಿಳಿಸಿದ್ದಾರೆ.
ನಿನ್ನೆ ಹೈಕೋರ್ಟ್ ಗೆ ವಿವರ ಸಲ್ಲಿಸಿದ ಅವರು, ಸಿದ್ದರಾಮಯ್ಯನವರು 1,300 ಎಕರೆ ಜಮೀನನ್ನು ಡಿನೋಟಿಫೈ ಮಾಡಲು ಸುಮಾರು 200 ಬಾರಿ ಸೂಚನೆ ಕಳುಹಿಸಿದ್ದಾರೆ. ಅವುಗಳಲ್ಲಿ 10 ಸೂಚನೆಗಳು ಹಾಲಿ ಶಾಸಕ ಭೈರತಿ ಬಸವರಾಜು ಅವರ ಪರವಾಗಿದೆ ಎಂದು ಆರೋಪಿಸಿದ್ದಾರೆ.
ಭೂಮಿಯ ಡಿನೋಟಿಫಿಕೇಶನ್ ಕೇಸಿಗೆ ಸಂಬಂಧಪಟ್ಟಂತೆ ಭ್ರಷ್ಟಾಚಾರ ನಿಗ್ರಹ ದಳ ತಮ್ಮ ವಿರುದ್ಧ ದಾಖಲಿಸಿರುವ ಎರಡು ಎಫ್ ಐಆರ್ ಗೆ ನ್ನು ಪ್ರಶ್ನಿಸಿ ಯಡಿಯೂರಪ್ಪನವರು ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ನಡೆಸುತ್ತಿದ್ದಾರೆ.
ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಡಾ.ಶಿವರಾಮ ಕಾರಂತ ಲೇ ಔಟ್ ಗೆಂದು ಮೀಸಲಾಗಿದ್ದ ಸುಮಾರು 3,546 ಎಕರೆ ಜಮೀನಿನಲ್ಲಿ 257 ಎಕರೆ ಜಮೀನನ್ನು ಡಿನೋಟಿಫಿಕೇಶನ್ ಮಾಡಿದ್ದರು ಎಂಬ ಆರೋಪ ಅವರ ಮೇಲಿದೆ.
ವಾಸ್ತವವಾಗಿ ಯಡಿಯೂರಪ್ಪನವರ ಡಿನೋಟಿಫಿಕೇಶನ್ ಶಿಫಾರಸನ್ನು ಬಿಡಿಎ ಸ್ವೀಕರಿಸಿರಲಿಲ್ಲ ಎಂದು ಅವರ ಪರ ವಕೀಲ ಹೈಕೋರ್ಟ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT