ಕೇಂದ್ರ ಚುನಾವಣಾ ಆಯೋಗ 
ರಾಜ್ಯ

ನಕಲಿ ವಿಳಾಸ ನೀಡಿದ್ದ ಪ್ರಕರಣ: ಅನರ್ಹತೆ ಭಯದಲ್ಲಿದ್ದ 8 ಎಂಎಲ್ ಸಿ ಗಳು ಸದ್ಯ ನಿರಾಳ!

ನಕಲಿ ವಿಳಾಸ ನೀಡಿ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಿ ಅನರ್ಹತೆ ಭೀತಿಯಲ್ಲಿದ್ದ 8 ವಿಧಾನ ಪರಿಷತ್ ಸದಸ್ಯರಿಗೆ ಚುನಾವಣಾ ಆಯೋಗ ...

ಬೆಂಗಳೂರು: ನಕಲಿ ವಿಳಾಸ ನೀಡಿ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಿ ಅನರ್ಹತೆ ಭೀತಿಯಲ್ಲಿದ್ದ 8 ವಿಧಾನ ಪರಿಷತ್ ಸದಸ್ಯರಿಗೆ ಚುನಾವಣಾ ಆಯೋಗ ಸದ್ಯಕ್ಕೆ ರಿಲೀಫ್ ನೀಡಿದೆ.
ಪ್ರಕರಣ ಸಂಬಂಧ ನಡೆದ ತನಿಖೆ ನಡೆದ ರೀತಿ ಸಮಾಧಾನ ತಂದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ನವದೆಹಲಿಯಲ್ಲಿರುವ ಪ್ರಧಾನ ಚುನಾವಣಾ ಆಯೋಗದ ಪ್ರಧಾನ ಕಚೇರಿಗೆ ತನಿಖಾ ವರದಿಯನ್ನು ರವಾನಿಸಿದ್ದು ಕ್ರಮ ಕೈಗೊಳ್ಳುವಂತೆ ತಿಳಿಸಿದೆ.
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಜಿಲ್ಲಾ ಚುನಾವಣಾಧಿಕಾರಿ ತನಿಖಾ ವರದಿಯನ್ನು ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರಿಗೆ ಸಲ್ಲಿಸಿದ್ದರು. ಈ ಸಂಬಂಧ ಶಂಕರಮೂರ್ತಿ ಚುನಾವಣಾ ಆಯೋಗದ ವರದಿ ಕೇಳಿದ್ದರು. 
ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ರಘು ಆಚಾರ್,  ಅಲ್ಲಂ ವೀರಭದ್ರಪ್ಪ,ಎನ್ ಎಸ್ ಬೋಸರಾಜು, ಎಸ್ ರವಿ, ಎಂ,ಡಿ ಲಕ್ಷ್ಮಿ ನಾರಾಯಣ, ಹಾಗೂ ಜೆಡಿಎಸ್ ನ ಸಿ.ಆರ್ ಮನೋಹರ್ ಮತ್ತು ಅಪ್ಪಾಜಿ ಗೌಡ ಸುಳ್ಳು ವಿಳಾಸ ನೀಡಿ ಭತ್ಯೆ ಮತ್ತು ಸೌಲಭ್ಯ ಪಡೆದು ಅನರ್ಹತೆ ಗೊಳ್ಳುವ ಆತಂಕದಲ್ಲಿರುವ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ಪರಿಷತ್ ಸದಸ್ಯರು, ಬೆಂಗಳೂರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸಿರುವುದಕ್ಕೆ ಹಾಗೂ ತನಿಖೆ ನಡೆದ ರೀತಿ ಸಂಬಂಧ ಚುನಾವಣಾ ಆಯೋಗ ಅಸಮಾಧಾನ ವ್ಯಕ್ತ ಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ತನಿಖೆಯಲ್ಲಿ ಆಗಿರುವ ದೋಷಗಳನ್ನು ಸರಿ ಪಡಿಸುವಂತೆ, ಜಿಲ್ಲಾ ಚುನಾವಣಾಧಿಕಾರಿಗೆ ಚುನಾವಣಾ ಆಯೋಗ ಸೂಚಿಸಿದೆ. ಇದೇ ವೇಳೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಅವರೊಂದಿಗೆ ಸಭಾಪತಿ ಶಂಕರಮೂರ್ತಿ ಇಂದು ಚರ್ಚೆ ನಡೆಸಲಿದ್ದಾರೆ. ನಂತರ ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಶಂಕರಮೂರ್ತಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT