ಕೇಂದ್ರ ಚುನಾವಣಾ ಆಯೋಗ 
ರಾಜ್ಯ

ನಕಲಿ ವಿಳಾಸ ನೀಡಿದ್ದ ಪ್ರಕರಣ: ಅನರ್ಹತೆ ಭಯದಲ್ಲಿದ್ದ 8 ಎಂಎಲ್ ಸಿ ಗಳು ಸದ್ಯ ನಿರಾಳ!

ನಕಲಿ ವಿಳಾಸ ನೀಡಿ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಿ ಅನರ್ಹತೆ ಭೀತಿಯಲ್ಲಿದ್ದ 8 ವಿಧಾನ ಪರಿಷತ್ ಸದಸ್ಯರಿಗೆ ಚುನಾವಣಾ ಆಯೋಗ ...

ಬೆಂಗಳೂರು: ನಕಲಿ ವಿಳಾಸ ನೀಡಿ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಿ ಅನರ್ಹತೆ ಭೀತಿಯಲ್ಲಿದ್ದ 8 ವಿಧಾನ ಪರಿಷತ್ ಸದಸ್ಯರಿಗೆ ಚುನಾವಣಾ ಆಯೋಗ ಸದ್ಯಕ್ಕೆ ರಿಲೀಫ್ ನೀಡಿದೆ.
ಪ್ರಕರಣ ಸಂಬಂಧ ನಡೆದ ತನಿಖೆ ನಡೆದ ರೀತಿ ಸಮಾಧಾನ ತಂದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ನವದೆಹಲಿಯಲ್ಲಿರುವ ಪ್ರಧಾನ ಚುನಾವಣಾ ಆಯೋಗದ ಪ್ರಧಾನ ಕಚೇರಿಗೆ ತನಿಖಾ ವರದಿಯನ್ನು ರವಾನಿಸಿದ್ದು ಕ್ರಮ ಕೈಗೊಳ್ಳುವಂತೆ ತಿಳಿಸಿದೆ.
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಜಿಲ್ಲಾ ಚುನಾವಣಾಧಿಕಾರಿ ತನಿಖಾ ವರದಿಯನ್ನು ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರಿಗೆ ಸಲ್ಲಿಸಿದ್ದರು. ಈ ಸಂಬಂಧ ಶಂಕರಮೂರ್ತಿ ಚುನಾವಣಾ ಆಯೋಗದ ವರದಿ ಕೇಳಿದ್ದರು. 
ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ರಘು ಆಚಾರ್,  ಅಲ್ಲಂ ವೀರಭದ್ರಪ್ಪ,ಎನ್ ಎಸ್ ಬೋಸರಾಜು, ಎಸ್ ರವಿ, ಎಂ,ಡಿ ಲಕ್ಷ್ಮಿ ನಾರಾಯಣ, ಹಾಗೂ ಜೆಡಿಎಸ್ ನ ಸಿ.ಆರ್ ಮನೋಹರ್ ಮತ್ತು ಅಪ್ಪಾಜಿ ಗೌಡ ಸುಳ್ಳು ವಿಳಾಸ ನೀಡಿ ಭತ್ಯೆ ಮತ್ತು ಸೌಲಭ್ಯ ಪಡೆದು ಅನರ್ಹತೆ ಗೊಳ್ಳುವ ಆತಂಕದಲ್ಲಿರುವ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ಪರಿಷತ್ ಸದಸ್ಯರು, ಬೆಂಗಳೂರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸಿರುವುದಕ್ಕೆ ಹಾಗೂ ತನಿಖೆ ನಡೆದ ರೀತಿ ಸಂಬಂಧ ಚುನಾವಣಾ ಆಯೋಗ ಅಸಮಾಧಾನ ವ್ಯಕ್ತ ಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ತನಿಖೆಯಲ್ಲಿ ಆಗಿರುವ ದೋಷಗಳನ್ನು ಸರಿ ಪಡಿಸುವಂತೆ, ಜಿಲ್ಲಾ ಚುನಾವಣಾಧಿಕಾರಿಗೆ ಚುನಾವಣಾ ಆಯೋಗ ಸೂಚಿಸಿದೆ. ಇದೇ ವೇಳೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಅವರೊಂದಿಗೆ ಸಭಾಪತಿ ಶಂಕರಮೂರ್ತಿ ಇಂದು ಚರ್ಚೆ ನಡೆಸಲಿದ್ದಾರೆ. ನಂತರ ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಶಂಕರಮೂರ್ತಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT