ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಕೇಸ್: ವಿಜಯಪುರ ಜೈಲಿನಲ್ಲಿ ಕೈದಿಗಳ ವಿಚಾರಣೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ, ವಿಶೇಷ ತನಿಖಾ ತಂಡದ ಅಧಿಕಾರಿಗಳು, ವಿಜಯಪುರ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳ ...

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ, ವಿಶೇಷ ತನಿಖಾ ತಂಡದ ಅಧಿಕಾರಿಗಳು,ವಿಜಯಪುರ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳ ವಿಚಾರಣೆ ನಡೆಸಿದ್ದಾರೆ.
ವಿಜಯಪುರ ಮತ್ತು ಕಲಬುರಗಿಯಲ್ಲಿರುವ ಆಳಂದ ಉಪ ಕಾರಾಗೃಹಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಶಸ್ತ್ರಾಸ್ತ್ರ ಕಾಯಿದೆಯಡಿ ಬಂಧಿತವಾಗಿರುವ ಕೈದಿಗಳ ವಿಚಾರಣೆ ನಡೆಸಿದರು ಎಂದು ಪೊಲೀಸ್ ಮೂಲಗಳಉ ತಿಳಿಸಿವೆ.
ಕಾನೂನುಬಾಹಿರವಾಗಿ ಶಸ್ತ್ರಾಸ್ತ್ರಗಳ ಮಾರಾಟ ಮತ್ತು ತಯಾರಿಕೆ ಬಗ್ಗೆ  ಅಧಿಕಾರಿಗಳು ಮಾಹಿತಿ ಕಲೆ ಹಾಕಲು ಯತ್ನಿಸಿದ್ದಾರೆ. ರೌಡಿ ಶೀಟರ್ ಹೆಬ್ಬೆಟ್ಟು ಮಂಜ ಮತ್ತು ಸೀನ ಸಹಚರರನ್ನು ವಿಜಯಪುರ ಜೈಲಿನಲ್ಲಿ ವಿಚಾರಣೆಗೊಳಪಡಿಸಲಾಗಿದೆ.
ಗೌರಿ ಹತ್ಯೆಗೆ ಕೆಲ ರೌಡಿ ಶೀಟರ್ ಗಳು ಶಸ್ತ್ರ ಪೂರೈಸಿರುವ ಶಂಕೆ ವ್ಯಕ್ತವಾಗಿದೆ, ದೇಶೀಯವಾಗಿ ನಿರ್ಮಿತವಾಗಿರುವ ಗನ್ ಬಳಸಲಾಗಿದ್ದು, ಹಲವು ಕೈದಿಗಳ ವಿಚಾರಣೆ ನಡೆಸಿದ ಅಧಿಕಾರಿಗಳು ತುರ್ತಾಗಿ ಅಲ್ಲಿಂದ ತೆರಳಿದರು. ಜೊತೆಗೆ ಇನ್ನೂ ಹಲವು ಜೈಲುಗಳಿಗೆ ಭೇಟಿ ನೀಡಿ ಅಧಿಕಾರಿಗಳ ತಂಡ ಎಂ ಎಂ ಕಲಬುರ್ಗಿ ಮತ್ತು ಗೌರಿ ಹತ್ಯೆಗೆ ಒಂದೇ ಮಾದರಿಯ ಪಿಸ್ತೂಲ್ ಬಳಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಶಸ್ತ್ರಸ್ತ್ರ ಕಾಯ್ದೆಯಡಿ ಬಂಧಿತರಾಗಿರುವ ಅತಿ ಹೆಚ್ಚು ಮಂದಿ ಕೈದಿಗಳು ವಿಜಯಪುರ ಜೈಲಿನಲ್ಲಿದ್ದಾರೆ, ಪ್ರತಿ ವರ್ಷ ಸುಮಾರು 20ರಿಂದ 30 ಕೇಸುಗಳು ದಾಖಲಾಗುತ್ತವೆ. ಪೊಲೀಸರು ಕೆಲ ಸುಧಾರಿತ ನಕ್ಸಲ್ ನಾಯಕರನ್ನು ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT