ವಿಧಾನಸೌಧ 
ರಾಜ್ಯ

ಹಾಲಿ ಸರ್ಕಾರದ ಅವಧಿಯಲ್ಲಿ ಯಾವುದೇ ಭೂಮಿಯನ್ನು ಡಿನೋಟಿಫೈ ಮಾಡಲಾಗಿಲ್ಲ: ಸಿಎಂ ಕಚೇರಿ

ಹಾಲಿ ಸರ್ಕಾರದ ಅವಧಿಯಲ್ಲಿ ಯಾವುದೇ ಭೂಮಿಯನ್ನು ಡಿನೋಟಿಫೈ ಮಾಡಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.

ಬೆಂಗಳೂರು: ಹಾಲಿ ಸರ್ಕಾರದ ಅವಧಿಯಲ್ಲಿ ಯಾವುದೇ ಭೂಮಿಯನ್ನು ಡಿನೋಟಿಫೈ ಮಾಡಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.
ಡಾ.ಕೆ.ಶಿವರಾಮ ಕಾರಂತ್ ಲೇಔಟ್ ನ 1,300 ಎಕರೆಯಷ್ಟು ಭೂಮಿಯನ್ನು ಡಿನೋಟಿಫೈ ಮಾಡಲಾಗಿದೆ ಎಂದು ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಅವರ ಪರ ವಕೀಲರು ಹೈಕೋರ್ಟ್ ಗೆ ಹೇಳಿದ್ದ ಬೆನ್ನಲ್ಲೇ ಸಿಎಂ ಸಚಿವಾಲಯದಿಂದ ಸ್ಪಷ್ಟನೆ ಬಂದಿದೆ. 
ಡಾ.ಕೆ ಶಿವರಾಮ ಕಾರಂತ್ ಲೇಔಟ್ ನಲ್ಲಿ ಯಾವುದೇ ಭೂಮಿಯನ್ನು ಡಿನೋಟಿಫೈ ಮಾಡಲಾಗಿಲ್ಲ. ಲೇಔಟ್ ನಿರ್ಮಾಣಕ್ಕಾಗಿ 2008ರಲ್ಲಿ 3,546 ಎಕರೆಯಷ್ಟು ಭೂಮಿಯನ್ನು ನೋಟಿಫೈ ಮಾಡಲಾಗಿತ್ತು. 2008-10 ರ ಅವಧಿಯಲ್ಲಿ ಈ ಹಿಂದಿನ ಸರ್ಕಾರ ಬಿಡಿಎ ಗೆ 257.20 ಎಕರೆಯಷ್ಟು ಭೂಮಿಯನ್ನು ಡಿನೋಟಿಫೈ ಮಾಡಲು ನಿರ್ದೇಶನ ನೀಡಿತ್ತು. ಇದಾದ ಬಳಿಕ 2012-14 ರಲ್ಲಿ ಭೂ ಸ್ವಾಧೀನ ಅಧಿಕಾರಿಗಳು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ ಆದೇಶದಲ್ಲಿ ನೀಡಲಾಗಿದ್ದ ಮಾನದಂಡಗಳ ಪ್ರಕಾರ 446.07 ಎಕರೆಯಷ್ಟು ಭೂಮಿಯನ್ನು ನೋಟಿಫೈ ಆದೇಶದಿಂದ ಹೊರಗಿಟ್ಟರು ಎಂದು ಸಿಎಂ ಕಚೇರಿ ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

ಕೊನೆಗೂ ರಿಪೇರಿಯಾಗಲೇ ಇಲ್ಲ.. Op Sindoor ವೇಳೆ ಭಾರತ ಹೊಡೆದಿದ್ದ Murid Air Base Building ಅನ್ನೇ ನೆಲಸಮ ಮಾಡಿದ ಪಾಕಿಸ್ತಾನ!

'TMC ಬೆಂಬಲಿಸದವರಿಗೆ ಬಂಗಾಳದಲ್ಲಿ ಇರುವ ಯಾವುದೇ ಹಕ್ಕಿಲ್ಲ': Mahua Moitra

ಜಮ್ಮು: ಎಲ್‌ಒಸಿ ಬಳಿ ಒಳನುಸುಳುವಿಕೆ ಯತ್ನ ವಿಫಲ; ಓರ್ವ ಉಗ್ರನ ಹತ್ಯೆ

T20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಭಾರತಕ್ಕೆ ಶಾಕ್ ಕೊಟ್ಟ ICC, ಸ್ಟಾರ್ ಆಟಗಾರನಿಗೆ ದುಬಾರಿ ದಂಡ.. ಕಾರಣ ಏನು ಗೊತ್ತಾ?

SCROLL FOR NEXT