ವಿಧಾನಸೌಧ 
ರಾಜ್ಯ

ಹಾಲಿ ಸರ್ಕಾರದ ಅವಧಿಯಲ್ಲಿ ಯಾವುದೇ ಭೂಮಿಯನ್ನು ಡಿನೋಟಿಫೈ ಮಾಡಲಾಗಿಲ್ಲ: ಸಿಎಂ ಕಚೇರಿ

ಹಾಲಿ ಸರ್ಕಾರದ ಅವಧಿಯಲ್ಲಿ ಯಾವುದೇ ಭೂಮಿಯನ್ನು ಡಿನೋಟಿಫೈ ಮಾಡಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.

ಬೆಂಗಳೂರು: ಹಾಲಿ ಸರ್ಕಾರದ ಅವಧಿಯಲ್ಲಿ ಯಾವುದೇ ಭೂಮಿಯನ್ನು ಡಿನೋಟಿಫೈ ಮಾಡಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.
ಡಾ.ಕೆ.ಶಿವರಾಮ ಕಾರಂತ್ ಲೇಔಟ್ ನ 1,300 ಎಕರೆಯಷ್ಟು ಭೂಮಿಯನ್ನು ಡಿನೋಟಿಫೈ ಮಾಡಲಾಗಿದೆ ಎಂದು ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಅವರ ಪರ ವಕೀಲರು ಹೈಕೋರ್ಟ್ ಗೆ ಹೇಳಿದ್ದ ಬೆನ್ನಲ್ಲೇ ಸಿಎಂ ಸಚಿವಾಲಯದಿಂದ ಸ್ಪಷ್ಟನೆ ಬಂದಿದೆ. 
ಡಾ.ಕೆ ಶಿವರಾಮ ಕಾರಂತ್ ಲೇಔಟ್ ನಲ್ಲಿ ಯಾವುದೇ ಭೂಮಿಯನ್ನು ಡಿನೋಟಿಫೈ ಮಾಡಲಾಗಿಲ್ಲ. ಲೇಔಟ್ ನಿರ್ಮಾಣಕ್ಕಾಗಿ 2008ರಲ್ಲಿ 3,546 ಎಕರೆಯಷ್ಟು ಭೂಮಿಯನ್ನು ನೋಟಿಫೈ ಮಾಡಲಾಗಿತ್ತು. 2008-10 ರ ಅವಧಿಯಲ್ಲಿ ಈ ಹಿಂದಿನ ಸರ್ಕಾರ ಬಿಡಿಎ ಗೆ 257.20 ಎಕರೆಯಷ್ಟು ಭೂಮಿಯನ್ನು ಡಿನೋಟಿಫೈ ಮಾಡಲು ನಿರ್ದೇಶನ ನೀಡಿತ್ತು. ಇದಾದ ಬಳಿಕ 2012-14 ರಲ್ಲಿ ಭೂ ಸ್ವಾಧೀನ ಅಧಿಕಾರಿಗಳು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ ಆದೇಶದಲ್ಲಿ ನೀಡಲಾಗಿದ್ದ ಮಾನದಂಡಗಳ ಪ್ರಕಾರ 446.07 ಎಕರೆಯಷ್ಟು ಭೂಮಿಯನ್ನು ನೋಟಿಫೈ ಆದೇಶದಿಂದ ಹೊರಗಿಟ್ಟರು ಎಂದು ಸಿಎಂ ಕಚೇರಿ ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT