ಸೈನೈಡ್ ಮೋಹನ್ 
ರಾಜ್ಯ

ಕುಖ್ಯಾತ ಪಾತಕಿ ಸೈನೈಡ್ ಮೋಹನ್ ಗೆ ಜೀವಾವಧಿ ಶಿಕ್ಷೆ

ರಾಜ್ಯವನ್ನು ಬೆಚ್ಚಿ ಬೀಳಿಸಿದ ಸಿರಿಯಲ್ ಕಿಲ್ಲರ್, ಸರಣಿ ಅತ್ಯಾಚಾರ ಪ್ರಕರಣಗಳ ಆರೋಪಿ ಸೈನೈಡ್ ಮೋಹನ್ ಗೆ ನಾಲ್ಕನೇ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಮಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿದ ಸಿರಿಯಲ್ ಕಿಲ್ಲರ್, ಸರಣಿ ಅತ್ಯಾಚಾರ ಪ್ರಕರಣಗಳ ಆರೋಪಿ ಸೈನೈಡ್ ಮೋಹನ್ ಗೆ ನಾಲ್ಕನೇ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಲೆ ಹಾಗೂ ಅತ್ಯಾಚಾರದ ನಾಲ್ಕನೇ ಪ್ರಕರಣದಲ್ಲೂ ಸೈನೈಡ್ ಮೋಹನ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 
ಸೈನೈಡ್ ಮೋಹನ್ 2004ರಿಂದ 2009ರ ಅವಧಿಯಲ್ಲಿ ಒಟ್ಟು 20 ಮಂದಿ ಯುವತಿಯರನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ. ಇದರಲ್ಲಿ 2013ರಲ್ಲಿ ಈತ ಒಟ್ಟು ಮೂರು ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿದ್ದಾನೆ. ಇದೀಗ ನಾಲ್ಕನೇ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಈಡಾಗಿದ್ದಾನೆ.
ಪುತ್ತೂರು ತಾಲೂಕಿನ ಪಟ್ಟೆಮಜಲು ಎಂಬಲ್ಲಿನ 22 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಮೋಹನ್‍ನನ್ನು ಈ ಶಿಕ್ಷೆ ವಿಧಿಸಿದೆ. 
ಪುತ್ತೂರು  ಪಟ್ಟೆಮಜಲಿನ ಬೀಡಿ ಕಟ್ಟುವ ಯುವತಿಯನ್ನು ಮೋಹನ, ತನ್ನ ಹೆಸರು ಆನಂದ್ ಎಂದು ಹೇಳಿ ಪರಿಚಯಿಸಿಕೊಂಡಿದ್ದ. ನಂತರ ಮೊಬೈಲ್ ನಂಬರ್ ಪಡೆದುಕೊಂಡು ಸಂಪರ್ಕ ಬೆಳೆಸಿದ್ದ. ಆಕೆಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿದ್ದ. ನಂತರ ಆಕೆಯನ್ನು ಸೆ. 17 2009ರಂದು ಪುತ್ತೂರಿನ ಬಸ್ ನಿಲ್ದಾಣಕ್ಕೆ ಒಡವೆ ಹಾಕಿಕೊಂಡು ಬಾ ಎಂದು ನಂಬಿಸಿ. ಇಬ್ಬರೂ ಮಡಿಕೇರಿಗೆ ಹೋಗಿ ಅಲ್ಲಿನ ವಸತಿ ನಿಲಯದಲ್ಲಿ ತಂಗಿದ್ದರು. ಯುವತಿಯೊಡನೆ ಲೈಂಗಿಕ ಸಂಪರ್ಕ ನಡೆಸಿ ಇದರಿಂದ ಗರ್ಭ ಧರಿಸುವ ಸಾಧ್ಯತೆ ಇದೆ ಹಾಗಾಗಿ ನಾನು ಕೊಡುವ ಗುಳಿಗೆ ತಿಂದರೆ ಗರ್ಭ ನಿಲ್ಲುವುದಿಲ್ಲ ಎಂದು ಸೈನೈಡ್ ನೀಡಿದ್ದ. ಅದನ್ನು ತಿಂದು ಯುವತಿ ಶೌಚಾಲಯದಲ್ಲಿ ಮೃತಪಟ್ಟ ಬಳಿಕ. ಆಕೆಯ ಬಳಿ ಇದ್ದ ಚಿನ್ನ, ಮೊಬೈಲ್‍ನೊಂದಿಗೆ ಮೋಹನ್ ಪರಾರಿಯಾಗಿದ್ದ. 
ಬಂಟ್ವಾಳದ ಬರಿಮಾರಿನ ಯುವತಿಯ ಕೊಲೆ ಪ್ರಕರಣದ ಪತ್ತೆಯೊಂದಿಗೆ ಸೆನೈಡ್ ಮೋಹನನ ಸರಣಿ ಹತ್ಯೆ ವಿಚಾರ ಬಯಲಾಗಿತ್ತು. ಸೈನೈಡ್ ಮೋಹನನ ಬಂಧನದೊಂದಿಗೆ ಇತರ ಪ್ರಕರಣಗಳೂ ಬೆಳಕಿಗೆ ಬಂದಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT