ಶ್ರೀಗಳ ಆಶೀರ್ವಾದ ಪಡೆದ ಸಚಿವ ಎಂಬಿ ಪಾಟೀಲ್ 
ರಾಜ್ಯ

ಬಿದರಿ ಜೊತೆ ಸಿದ್ದಗಂಗಾ ಮಠಕ್ಕೆ ಎಂಬಿ ಪಾಟೀಲ್ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ಸಚಿವ

ಜಲ ಸಂಪನ್ಮೂಲ ಸಚಿವ ಡಾ.ಎಂ.ಬಿ ಪಾಟೀಲ್, ಗುರುವಾರ ರಾತ್ರಿ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀ ಶಿವಕುಮಾರ ಸ್ವಾಮಿಜಿ ಮತ್ತು ಸಿದ್ದಲಿಂಗ ಸ್ವಾಮೀಜಿ ಅವರನ್ನು...

ತುಮಕೂರು: ಜಲ ಸಂಪನ್ಮೂಲ ಸಚಿವ ಡಾ.ಎಂ.ಬಿ ಪಾಟೀಲ್, ಗುರುವಾರ ರಾತ್ರಿ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀ ಶಿವಕುಮಾರ ಸ್ವಾಮಿಜಿ ಮತ್ತು ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ಸಚಿವರ ಜೊತೆಗೆ ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಕೂಡ ಹಾಜರಿದ್ದರು. 1980 ರಲ್ಲಿ ಮಠದಲ್ಲಿ ಶಿವಕುಮಾರ ಸ್ವಾಮಿಜಿ ಮತ್ತು ದಿವಂಗತ ಗೌರಿ ಶಂಕರ ಸ್ವಾಮೀಜಿ ನಡುವಿನ ಭಿನ್ನಾಭಿಪ್ರಾಯದ ವೇಳೆ ಶಂಕರ್ ಬಿದರಿ ಪ್ರಮುಖ ಪಾತ್ರ ವಹಿಸಿದ್ದರು.
ತಮ್ಮ ಖಾಸಗಿ ಕಾರಿನಲ್ಲಿ ಮಠಕ್ಕೆ ಆಗಮಿಸಿದ ಪಾಟೀಲ  ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು, ನಂತರ ಮಾತನಾಡಿದ ಅವರು ಶಿವಕುಮಾರ ಸ್ವಾಮೀಜಿ ನಮ್ಮ ದೇವರು, ಅವರು ಆಧುನಿಕ ಬಸವಣ್ಣ, ಅವರ ಆದೇಶದಂತೆ ಮುನ್ನಡೆಯುತ್ತೇವೆ ಎಂದು ಹೇಳಿದ್ದಾರೆ,
ಇನ್ನೂ ಎಸ್ ಐ ಟಿ ಕಾಲೇಜಿನ ಸಿಬ್ಬಂದಿ ಶಿನಕುಮಾರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT