ಗೌರಿ ಲಂಕೇಶ್ 
ರಾಜ್ಯ

ಗೌರಿ ಹತ್ಯೆ ತನಿಖೆ: ಬಲ ಪಂಥೀಯ ಸಂಘಟನೆಗಳ ಕಚೇರಿಗೆ ಎಸ್ಐಟಿ ಭೇಟಿ; ದಾಖಲೆಗಳ ಪರಿಶೀಲನೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿರುವ ಬಲಪಂಥೀಯ ಸಂಘಟನೆಗಳ ಕಚೇರಿಗಳಿಗೆ ...

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿರುವ ಬಲಪಂಥೀಯ ಸಂಘಟನೆಗಳ ಕಚೇರಿಗಳಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದೆ.
ಶುಕ್ರವಾರ ಕಚೇರಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕೆಲವು ದಾಖಲಾತಿಗಳನ್ನು ಕೊಂಡೊಯ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಸ್ ಐಟಿ ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುತ್ತಿದೆ. ಗೌರಿ ಹತ್ಯೆಗೆ ಬಳಸಿರುವಂತಹ ಗನ್ ಹಾಗೂ ಕಲ್ಬುರ್ಗಿ ಹತ್ಯೆಗೆ ಬಳಸಿರುವ ಗನ್ ನಲ್ಲಿ ಸಾಮ್ಯತೆಯಿದೆ, ಆದರೆ ಎರಡು ಗನ್ ಗಳು ಒಂದೇ ಎಂದು ಹೇಳಲಾಗುವುದಿಲ್ಲ ಎಂದು ಎಫ್ ಎಸ್ ಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಜೊತೆಗೆ ಗೋವಿಂದ ಪನ್ಸಾರೆ ಮತ್ತು ನರೇಂದ್ರ ದಾಬೋಲ್ಕರ್ ಅವರ ಹತ್ಯೆಗೂ ಇದೇ ಮಾದರಿಯ ಗನ್ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬಲಪಂಥೀಯ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಕೆಲ ನಾಯಕರನ್ನು ಭೇಟಿ ಮಾಡಲು ಮಹಾರಾಷ್ಟ್ರಕ್ಕೆ ತಂಡವೊಂದನ್ನು ಕಳುಹಿಸಲಾಗಿದೆ.
ಇನ್ನೂ ಗೌರಿ ಹತ್ಯೆಯಲ್ಲಿ ಎಡ ಪಂಥೀಯ ಸಂಘಟನೆಗಳ ಕೈವಾಡವಿದೆ ಎಂಬ ಮಾತುಗಳನ್ನು ಅಲ್ಲಗಳೆಯದ ಎಸ್ ಐಟಿ ನಾಪತ್ತೆಯಾಗಿರುವ ನಕ್ಸಲ್ ನಾಯಕ ವಿಕ್ರಮ್  ಗೌಡನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಗೌರಿ ಲಂಕೇಶ್ ಇಬ್ಬರು ನಕ್ಸಲರನ್ನು ಶರಣಾಗಿಸಿ ಸಮಾಜಾದ ಮುಖ್ಯ ವಾಹಿನಿಗೆ ತರಲು ಯತ್ನಿಸುತ್ತಿದ್ದರು ಈ ಹಿನ್ನೆಲೆಯಲ್ಲಿ ವಿಕ್ರಮ್ ಗೌಡ ಗೌರಿ ಮೇಲೆ ಧ್ವೇಷ ಸಾಧಿಸುತ್ತಿದ್ದ ಎಂದು ಹೇಳಲಾಗುತ್ತಿದೆ.
ಪ್ರಕರಣ ಸಂಬಂಧ ಇದುವರೆಗೂ ಎಸ್ ಐಟಿ 100 ಕ್ಕೂ ಮಂದಿ ಗೂ ಹೆಚ್ಚು ಜನರನ್ನು ವಿಚಾರಣೆ ನಡೆಸಿದ್ದಾರೆ, ಗಾರಿ ನಿವಾಸದ ಬಳಿಯಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ 48 ಗಂಟೆಗಳ ಕಾಲ ಒಡಾಡಿದ್ದವರ ವಿಚಾರಣೆ ಕೂಡ ನಡೆಸಲಿದೆ. 
ಇದೇ ವೇಳ್ ಖ್ಯಾತ ರೌಡಿ ಕುಣಿಕಲ್ ಗಿರಿ ಸ್ವತಃ ತಾನಾಗಿಯೇ  ಪೊಲೀಸ್ ಠಾಣೆಗೆ ಬಂದು ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿ ಹೋಗಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT