ಹುತಾತ್ಮ ಯೋಧ ಹನುಮಂತಪ್ಪ ತಾಯಿ ಜೊತೆ ಅನಂತ್ ಕುಮಾರ್ ಹೆಗೆಡೆ, ಜೋಶಿ ಚರ್ಚೆ 
ರಾಜ್ಯ

ಹುತಾತ್ಮ ಲ್ಯಾನ್ಸ್ ನಾಯಕ್ ಹನುಮಂತಪ್ಪ ಹುಟ್ಟೂರಿನಲ್ಲಿ 12 ಗಂಟೆಗಳಲ್ಲಿ 101 ಶೌಚಾಲಯಗಳ ನಿರ್ಮಾಣ!

ಸಿಯಾಚಿನ್ ಹುತಾತ್ಮ ಯೋಧ ಲ್ಯಾನ್ಸ್ ನಾಯಕ್ ಹನುಮಂತಪ್ಪ ಹುಟ್ಟೂರಾದ, ಕುಂದಗೋಳ ತಾಲೂಕಿನ ಬೆಟದೂರು ಗ್ರಾಮ ಭಾನುವಾರ ಒಂದು ಅಪರೂಪದ...

ಹುಬ್ಬಳ್ಳಿ: ಸಿಯಾಚಿನ್ ಹುತಾತ್ಮ ಯೋಧ ಲ್ಯಾನ್ಸ್ ನಾಯಕ್ ಹನುಮಂತಪ್ಪ ಹುಟ್ಟೂರಾದ, ಕುಂದಗೋಳ ತಾಲೂಕಿನ ಬೆಟದೂರು ಗ್ರಾಮ ಭಾನುವಾರ ಒಂದು ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಸುಮಾರು 12 ಗಂಟೆಗಳಲ್ಲಿ 101 ಶೌಚಾಲಯಗಳನ್ನು ಗ್ರಾಮದಲ್ಲಿ ನಿರ್ಮಿಸಲಾಗಿದೆ.
ಈ ಗ್ರಾಮದಲ್ಲಿ 1,030 ಮನೆಗಳಿವೆ. ಅದರಲ್ಲಿ 800 ಮನೆಗಳಲ್ಲಿ ಮಾತ್ರಶೌಚಾಲಯಗಳಿದ್ದವು, ಸೆಪ್ಟಂಬರ್ 17 ರಿಂದ ಅಕ್ಟೋಬರ್ 2 ರ ವರೆಗೂ ನಡೆಯುವ  ಸ್ವಚ್ಛ ಭಾರತ ಅಭಿಯಾನದಡಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ನಡೆಯಲಿದೆ, ಶೌಚಾಲಯ ನಿರ್ಮಿಸಿಕೊಳ್ಳಲು ಶಕ್ತರಿಲ್ಲದ ಕುಟುಂಬಗಳಿಗೆ ಗ್ರಾಮದಲ್ಲಿ 101 ಶೌಚಾಲಯ ನಿರ್ಮಿಸಿ ಕೊಡಲಾಗಿದೆ. ಉಳಿದ ಮನೆಗಳಿಗೆ ಅಕ್ಟೋಬರ್ 2 ರಳೊಗೆ ಶೌಚಾಲಯ ನಿರ್ಮಿಸಿಕೊಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ.
ಶೌಚಾಲಯ ನಿರ್ಮಾಣದ ಉದ್ದೇಶಕ್ಕಾಗಿ ಕೆಲ ದಿನಗಳ ಹಿಂದೆಯೇ  ಗುಂಡಿ ತೋಡಿ ಟಾಯ್ಲೆಟ್ ಸೀಟ್ ಗಳನ್ನು ಸಿದ್ಧಗೊಳಿಸಲಾಗಿತ್ತು,  ಭಾನುವಾರ ಇಂಟರ್ ಲಾಕಿಂಗ್ ಇಟ್ಟಿಗೆಗಳಿಂದ ಗೋಡೆ ಕಟ್ಟಿ, ಮೇಲ್ಛಾವಣಿಗಾಗಿ ಶೀಟ್ ಗಳನ್ನು ಅಳವಡಿಸಲಾಯಿತು. ಶೌಚಾಲಯದ ಮೇಲ್ಬಾಗದಲ್ಲಿ ನೀರಿನ ಟ್ಯಾಂಕರ್, ಫಿಕ್ಸ್ ಮಾಡಲಾಗಿದೆ. 
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಭಾನುವಾರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಯಲು ಮುಕ್ತ ಶೌಚಕ್ಕಾಗಿ ಪ್ರತಿ ವರ್ಷ 600 ಕೋಟಿ ರು ಹಣ ಬಿಡುಗಡೆ ಮಾಡುತ್ತಿದೆ ಎಂದು ಹೇಳಿದರು. 
ಪ್ರತಿ ಮನೆ ಮನೆಯಲ್ಲೂ ಶೌಚಾಲಯ ನಿರ್ಮಿಸಲು ಕೇಂದ್ರ ಸರ್ಕಾರ ಸಾಮಾನ್ಯ ವರ್ಗದವರಿಗೆ 12 ಸಾವಿರ  ಹಾಗೂ ಎಸ್ ಎಸ್ಸಿ, ಎಸ್ಟಿ ವರ್ಗದವರಿಗೆ 15 ಸಾವಿರ ರು. ಪ್ರೋತ್ಸಾಹ ಧನ ನೀಡುತ್ತಿದೆ, ಹೀಗಾಗಿ ಗ್ರಾಮಸ್ಥರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಅಕ್ಟೋಬರ್ 2 ರೊಳಗೆ ಜಿಲ್ಲೆಯನ್ನು ಬಯಲು ಶೌಚದಿಂದ ಮುಕ್ತಗೊಳಿಸಲಾಗುವುದು ಎಂದು ಧಾರವಾಡ ಜಿಲ್ಲಾ ಪಂಚಾಯತ್  ಸಿಇಓ ಸ್ನೇಹಲ್ ಆರ್ ಹೇಳಿದ್ದಾರೆ. 
ಜಿಲ್ಲೆಯಲ್ಲಿ 1.44 ಲಕ್ಷ ಮನೆಗಳಿದ್ದು, ಅದರಲ್ಲಿ 1.20 ಲಕ್ಷ ಮನೆಗಳಲ್ಲಿ ಶೌಚಾಲಯಗಳಿವೆ, ಉಳಿದ 13 ಸಾವಿರ ಶೌಚಾಲಯಗಳ ನಿರ್ಮಾಣ ಕಾರ್ಯ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಸಂಸದ ಪ್ರಹ್ಲಾದ್ ಜೋಶಿ ಮತ್ತು ಸಚಿವ ಹೆಗಡೆ ಇಬ್ಬರು ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ್ ಮನೆಗೆ ಭೇಟಿ ನೀಡಿ, ಅವರ ತಾಯಿ ಬಸಮ್ಮ ಮತ್ತು ಕುಟುಂಬಸ್ಥರ ಜೊತೆ ಚರ್ಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT