ಅಪಘಾತಕ್ಕೀಡಾದ ಕಾರು 
ರಾಜ್ಯ

ಬೆಂಗಳೂರು: ಅಪ್ರಾಪ್ತ ಬಾಲಕರ ಕಾರ್ ರೇಸ್; 150 ಕಿಮೀ ವೇಗ, ಭೀಕರ ಅಪಘಾತ, ಒಬ್ಬನ ಸಾವು, ಇಬ್ಬರಿಗೆ ಗಾಯ

ವೇಗವಾಗಿ ಕಾಲು ಚಲಾಯಿಸಿದ್ದರಿಂದ ರಸ್ತೆ ವಿಭಜಕಕ್ಕೆ ಬಡಿದು ನಂತರ ಮತ್ತೆರಡು ವಾಹನಗಳಿಗೆ ಡಿಕ್ಕಿ ಹೊಡೆದು...

ಬೆಂಗಳೂರು: ವೇಗವಾಗಿ ಕಾಲು ಚಲಾಯಿಸಿದ್ದರಿಂದ ರಸ್ತೆ ವಿಭಜಕಕ್ಕೆ ಬಡಿದು ನಂತರ ಮತ್ತೆರಡು ವಾಹನಗಳಿಗೆ ಡಿಕ್ಕಿ ಹೊಡೆದು ಹದಿಹರೆಯದ ಬಾಲಕನೊಬ್ಬ ಮೃತಪಟ್ಟು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲ್ಕ್ ಬೋರ್ಡ್ ಫ್ಲೈ ಓವರ್ ನಲ್ಲಿ ನಿನ್ನೆ ನಸುಕಿನ ಜಾವ 3 ಗಂಟೆಗೆ ಸಂಭವಿಸಿದೆ.
ಮೃತಪಟ್ಟವರು 18 ವರ್ಷಕ್ಕಿಂತ ಕೆಳಗಿನ ಹುಡುಗರಾಗಿರುವುದರಿಂದ ಬೆಂಗಳೂರು ಪೊಲೀಸರು ಪೋಷಕರು ಮತ್ತು ಹುಡುಗರ ವಿರುದ್ಧ ಅಜಾಗರೂಕತೆ ಕೇಸು ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕಾರನ್ನು 150 ಕಿಲೋ ಮೀಟರ್ ವೇಗದಲ್ಲಿ ಚಲಾಯಿಸಲಾಗುತ್ತಿತ್ತು. ಕಾರಿನ ವೇಗಕ್ಕೆ ಒಂದು ಕಾರು ರಸ್ತೆ ಮಧ್ಯದಿಂದ ಹೊರಬಂದು ಹಾಲಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿತು. ಮೃತ ಹುಡುಗ ದೇಹ ಮತ್ತು ತಲೆ ಪ್ರತ್ಯೇಕವಾಗಿ ಬಿದ್ದಿದೆ. ಆತನ ಇನ್ನಿಬ್ಬರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಬಾಲಕನನ್ನು ಅರ್ಫನ್ ಎಂದು ಗುರುತಿಸಲಾಗಿದೆ. ಆತ ಸಲೀಂ ಎಂಬ ವ್ಯಾಪಾರಿಯ ಪುತ್ರ. ಮತ್ತಿಬ್ಬರಾದ ಶ್ರೀನಿವಾಸ್ ಮತ್ತು ಅನಿರುದ್ಧ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮೂವರು ಹದಿಹರೆಯದ ಯುವಕರು ನಗರದ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಪಿಯುಸಿ ಓದುತ್ತಿದ್ದು ಹೆಚ್ ಎಸ್ ಆರ್ ಲೇಔಟ್ ನಿವಾಸಿಗಳಾಗಿದ್ದಾರೆ.
ಈ ಮೂವರು ಅಪ್ರಾಪ್ತರು ಪ್ರತ್ಯೇಕ ಕಾರು ಚಲಾಯಿಸುತ್ತಿದ್ದರು. ನಸುಕಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೂವರು ಸ್ನೇಹಿತರು ವಿಹಾರಕ್ಕೆಂದು ಎಲೆಕ್ಟ್ರಾನಿಕ್ ಸಿಟಿಗೆ ತೆರಳಿ ಹಿಂತಿರುಗುತ್ತಿದ್ದರು. ಕಾರುಗಳು ಸಿಲ್ಕ್ ಬೋರ್ಡ್ ಫ್ಲೈ ಓವರ್ ಗೆ ತಲುಪಿ ಕೆಳಗೆ ಇಳಿಯುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡರು. ಅರ್ಫನ್ ನ ಕಾರು ರಸ್ತೆ ವಿಭಜಕಕ್ಕೆ ಗುದ್ದಿ ಸ್ಥಳದಲ್ಲಿಯೇ ಮೃತಪಟ್ಟನು. ಶ್ರೀನಿವಾಸ್ ಕಾರು ರಸ್ತೆ ವಿಭಜಕಕ್ಕೆ ಗುದ್ದಿ ಇನ್ನೊಂದು ಕಡೆಗೆ ನೆಗೆಯಿತು. ಹಾಲಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿತು. ಅನಿರುದ್ಧನ ಕಾರು ಸಹ ವಾಹನವೊಂದಕ್ಕೆ ಡಿಕ್ಕಿ ಹೊಡೆದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಾಲಿನ ಟ್ಯಾಂಕರ್ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದು ಆತ ಗಾಯಗಳಾಗದೆ ಬದುಕುಳಿದಿದ್ದಾನೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಕುವೈತ್‌ ಪ್ರಮುಖ ತೈಲ ಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ, ಭಾರೀ ಬೆಂಕಿ

ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಬೇಡ: ಟ್ರಂಪ್ ಸೂಚನೆ ಬೆನ್ನಲ್ಲೇ ಹಿಂದೆ ಸರಿದ ಇಸ್ರೇಲ್, ಇರಾನ್ 'ನಾಶವಾಗಿದೆ' ಎಂದ ನೆತನ್ಯಾಹು

ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿಯಾದರೆ ಒತ್ತಡಕ್ಕೆ ಮಣಿಯದೆ ಅನಿಯಂತ್ರಿತ ದಾಳಿ: ಇರಾನ್ ಕಠಿಣ ಎಚ್ಚರಿಕೆ

West Asia war: ಇರಾನ್ ಗ್ಯಾಸ್ ಫೀಲ್ಡ್ ಮೇಲಿನ ದಾಳಿ ‘ಸೋಲೋ ಆಪರೇಷನ್’; ಅಮೆರಿಕಾ ಪಾತ್ರವಿಲ್ಲ- ಇಸ್ರೇಲ್ ಸ್ಪಷ್ಟನೆ

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಪಾಪಣ್ಣ ಮಟನ್‌ ಸ್ಟಾಲ್‌ ಮುಂದೆ ಜನರ ಕ್ಯೂ..!

SCROLL FOR NEXT