ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ 
ರಾಜ್ಯ

ಗೌರಿ ಹತ್ಯೆ ತನಿಖೆ ಚುರುಕು: ಕರಪತ್ರ ಅಂಟಿಸಿ ಹಂತಕರ ಮಾಹಿತಿಗಾಗಿ ಪೊಲೀಸರ ಮನವಿ

ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿರುವ ಅಧಿಕಾರಿಗಳು, ರಾಜರಾಜೇಶ್ವರಿ ನಗರದಲ್ಲಿ ಕರಪತ್ರಗಳನ್ನು ಅಂಟಿಸಿ ಹಂತಕರ ಬಗ್ಗೆ ಮಾಹಿತಿ ನೀಡುವಂತೆ...

ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿರುವ ಅಧಿಕಾರಿಗಳು, ರಾಜರಾಜೇಶ್ವರಿ ನಗರದಲ್ಲಿ ಕರಪತ್ರಗಳನ್ನು ಅಂಟಿಸಿ ಹಂತಕರ ಬಗ್ಗೆ ಮಾಹಿತಿ ನೀಡುವಂತೆ ಸ್ಥಳೀಯರ ಬಳಿ ಮನವಿ ಮಾಡಿಕೊಂಡಿದ್ದಾರೆ. 
ರಾಜರಾಜೇಶ್ವರಿ ನಗರದಲ್ಲಿನ ತಮ್ಮ ಸ್ವಗೃಹದಲ್ಲಿಯೇ ಗೌರಿ ಲಂಕೇಶ್ ಅವರ ಹತ್ಯೆಯಾಗಿತ್ತು. ಇದಾದ ಬಳಿಕ ಆಪಾರ್ಟ್ ಮೆಂಟ್ ಗಳಲ್ಲಿದ್ದವರು, ಬಾಡಿಗೆ ಮನೆಯಲ್ಲಿದ್ದವರು, ಹೋಟೆಲ್, ಪಿಜಿ, ಹಾಸ್ಟೆಲ್, ರೆಸಾರ್ಟ್ ಗಳಲ್ಲಿದ್ದ ಸಾಕಷ್ಟು ಮಂದಿ ಸ್ಥಳವನ್ನು ತೊರೆದಿದ್ದರು. 
ಇದೀಗ ತನಿಖೆಯನ್ನು ಚುರುಕುಗೊಳಿಸಿರುವ ಅಧಿಕಾರಿಗಳು ರಾಜರಾಜೇಶ್ವರಿ ನಗರ ಪೊಲೀಸ್ ಇನ್ಸ್ ಪೆಕ್ಟರ್ ಸಹಿ ಮಾಡಿರುವ 4,000 ಕರಪತ್ರಗಳನ್ನು ಸ್ಥಳಗಳಲ್ಲಿ ಅಂಟಿಸಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಾಹಿತಿಗಳು ಸಿಕ್ಕರೂ ಮಾಹಿತಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. 
ಈಗಾಗಲೇ 22,000 ಕರಪತ್ರಗಳನ್ನು ಮುದ್ರಿಸಲಾಗಿದ್ದು, ಇದರಲ್ಲಿ 4,000 ಕರಪತ್ರಗಳನ್ನು ಅಂಟಿಸಲಾಗಿದೆ. ಕರಪತ್ರದಲ್ಲಿ ಪೊಲೀಸರ ಇಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆಗಳನ್ನು ನೀಡಲಾಗಿದ್ದು, ಹಂತಕರ ಕುರಿತಂತೆ ಯಾವುದೇ ರೀತಿಯ ಮಾಹಿತಿ ಸಿಕ್ಕರೂ ಕೂಡಲೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದ್ದಾರೆ. 
ಇನ್ನು ಗೌರಿ ಹತ್ಯೆಯಾದ ಬಳಿಕ ವಿವಾದಾತ್ಮಕ ಹೇಳಿಕೆಗಳನನು ನೀಡಿದ್ದ 11ಕ್ಕೂ ಹೆಚ್ಚು ಜನರಿಗೆ ವಿಶೇಷ ತನಿಖಾ ದಳದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ. 
ಹತ್ಯೆಯಾಗುವುದಕ್ಕೂ ಮುನ್ನ ಗೌರಿಯವರು ಜ್ಯೋತಿಷಿಯೊಬ್ಬರ ವಿರುದ್ಧ ಲೇಖನವೊಂದನ್ನು ಬರೆದಿದ್ದರು. ಈ ಸಂಬಂಧ ಎಸ್ಐಟಿ ಅಧಿಕಾರಿಗಳು ಆರ್'ಟಿ ನಗರದಲ್ಲಿರುವ ಜ್ಯೋತಿಷಿಯೊಬ್ಬರನ್ನು ವಿಚಾರಣೆ ನಡೆಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT