ಮೈಸೂರಿನಲ್ಲಿ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ರೈತರ ಹಿತಕಾಯಲು ಸರ್ಕಾರ ಬದ್ಧ, ಕಾವೇರಿ ನಿರ್ವಹಣಾ ಮಂಡಳಿಗೆ ನಮ್ಮ ವಿರೋಧ: ಸಿಎಂ ಸಿದ್ದರಾಮಯ್ಯ

ರಾಜ್ಯದ ರೈತರ ಹಿತಕಾಯಲು ಕರ್ನಾಟಕ ಸರ್ಕಾರ ಬದ್ಧವಾಗಿದ್ದು, ಈ ಹಿಂದಿನಂತೆಯೇ ಕಾವೇರಿ ನಿರ್ವಹಣಾ ಮಂಡಳಿಗೆ ನಮ್ಮ ವಿರೋಧ ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರು: ರಾಜ್ಯದ ರೈತರ ಹಿತಕಾಯಲು ಕರ್ನಾಟಕ ಸರ್ಕಾರ ಬದ್ಧವಾಗಿದ್ದು, ಈ ಹಿಂದಿನಂತೆಯೇ ಕಾವೇರಿ ನಿರ್ವಹಣಾ ಮಂಡಳಿಗೆ ನಮ್ಮ ವಿರೋಧ ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಾಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾಗಬೇಕು ಎಂದು ಹೇಳಿದೆಯಾದರೂ, ಸುಪ್ರೀಂ  ಕೋರ್ಟ್ ಗೆ ಮಂಡಳಿ ರಚನೆಗೆ ಅಧಿಕಾರವಿಲ್ಲ. ಸಂಸತ್ತಿಗೆ ಮಾತ್ರ ಆ ಅಧಿಕಾರವಿದ್ದು, ಈ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರದವೇ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದೆ ಎಂದು ಹೇಳಿದರು.

ಇದೇ ವೇಳೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಾಜ್ಯದ ಪಾಲಿಗೆ ಕರಾಳ ಶಾಪವಾಗಲಿದ್ದು, ಇದೇ ಕಾರಣಕ್ಕೆ ನಾವು ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಈ ಬಗ್ಗೆ ನಮ್ಮ ರಾಜ್ಯದ ವಕೀಲರನ್ನು  ನಾವು ಸಂಪರ್ಕಿಸಿದ್ದು, ನ್ಯಾಯಾಲಯಲ್ಲಿ ಸಮರ್ಥವಾಗಿ ವಾದ ಮಂಡಿಸುವಂತೆ ಸೂಚಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಬಳಿಕ ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಸ್ಥಳಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಕಾಮಗಾರಿಗಳ ಮಾಹಿತಿ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT