ಮೈಸೂರು ಬಳ್ಳಾರಿ ನೂತನ ವಿಮಾನ ಸೇವೆ ಉದ್ಘಾಟಿಸಿದ ಆರ್.ವಿ. ದೇಶಪಾಂಡೆ 
ರಾಜ್ಯ

ಮೈಸೂರು, ಬಳ್ಳಾರಿಯಲ್ಲಿ ನೂತನ ವಿಮಾನ ಸೇವೆ ಆರಂಭ

ಮಂಡಕಳ್ಳಿ ಅಲ್ಲಿನ ಮೈಸೂರು ವಿಮಾನ ನಿಲ್ದಾಣದ ವಿಮಾನ ಸೇವೆಗಳನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಮೈಸೂರು-ಚೆನ್ನೈ-ಕೊಚ್ಚಿ ಮಾರ್ಗದಲ್ಲಿ ವಿಮಾನ ಸಂಚಾರ ಪ್ರಾರಂಭಿಸುವುದಾಗಿ ...

ಬೆಂಗಳೂರು: ಮಂಡಕಳ್ಳಿ ಅಲ್ಲಿನ  ಮೈಸೂರು ವಿಮಾನ ನಿಲ್ದಾಣದ ವಿಮಾನ ಸೇವೆಗಳನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಮೈಸೂರು-ಚೆನ್ನೈ-ಕೊಚ್ಚಿ ಮಾರ್ಗದಲ್ಲಿ ವಿಮಾನ ಸಂಚಾರ ಪ್ರಾರಂಭಿಸುವುದಾಗಿ  ಬುಧವಾರ ಘೋಷಿಸಲಾಯಿತು. ಇದು ರಾಜ್ಯದಲ್ಲಿ ಘೋಷಿಸಿದ ಎರಡು ಹೊಸ ವಿಮಾನ ಸೇವೆಯಲ್ಲಿ ಒಂದಾಗಿರುತ್ತದೆ.
ಇನ್ನೊಂದು ವಿಮಾನ ಸೇವೆ ಹೈದರಾಬಾದ್-ಬಳ್ಳಾರಿ-ಹೈದರಾಬಾದ್ ಮಾರ್ಗದಲ್ಲಿದ್ದು, ಗುರುವಾರ ಪ್ರಾರಂಭಗೊಳ್ಳಲಿದೆ. ಇವುಗಳು ನರೇಂದ್ರ ಮೋದಿ ಸರ್ಕಾರದ ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆ ವ್ಯಾಪ್ತಿಯಲ್ಲಿ ಬರಲಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್. ವಿ. ದೇಶಪಾಂಡೆ "ಹೊಸ ಮಾರ್ಗಗಳು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕೊಡುಗೆ ನೀದಲಿವೆ" ಎಂದು ಹೇಳಿದರು. 
ಈ ಸೇವೆಗಳು ಉದ್ಯಮ, ಪ್ರವಾಸೋದ್ಯಮ, ಸಾರಿಗೆ, ವ್ಯಾಪಾರ ಮತ್ತು ವಾಣಿಜ್ಯ ವಲಯಗಳ ಬೆಳವಣಿಗೆಗೆ ಪೂರಕವಾಗುತ್ತವೆ. ಎರಡು ನಗರಗಳಿಗೆ ಕೈಗೆಟುಕುವ ವಾಯು ಸೇವೆಗಳನ್ನು ಒದಗಿಸುತ್ತಿದೆ ಎಂದು ದೇಶಪಾಂಡೆ ಹೇಳಿದ್ದಾರೆ.
ರಾಜ್ಯದಲ್ಲಿನ ಎರಡು ವಿಮಾನ ನಿಲ್ದಾಣಗಳ ಎರಡು ಮಾರ್ಗಗಳನ್ನು ಪ್ರಾದೇಶಿಕ ಸಂಪರ್ಕ ಯೋಜನೆ (ಆರ್ ಸಿ ಎಸ್) ಅಡಿಯಲ್ಲಿ ಪ್ರಾರಂಭಿಸಲಾಗಿದೆ. "ಆರ್ ಸಿ ಎಸ್ ಅಡಿಯಲ್ಲಿ, ಏರ್ ಲೈನ್ಸ್ ನಿರ್ವಾಹಕರ ಹರಾಜಿನಲ್ಲಿ ಮೊದಲ ಸುತ್ತಿನಲ್ಲಿ ನಾಲ್ಕು ವಿಮಾನ ನಿಲ್ದಾಣಗಳು - ಮೈಸೂರು, ಬೀದರ್, ಬೆಂಗಳೂರು ಮತ್ತು ಬಳ್ಳಾರಿಗಳನ್ನು ಆಯ್ಕೆ ಮಾಡಲಾಗಿದೆ. ಈ ವಿಮಾನ ನಿಲ್ದಾಣಗಳ ಅಭಿವೃದ್ಧಿಗಾಗಿ ಮತ್ತು ಏರ್ ಲೈನ್ಸ್ ಕಾರ್ಯಾಚರಣೆಗಳ ಪ್ರಾರಂಭಕ್ಕಾಗಿ, ನಮ್ಮ ಸರ್ಕಾರವು ಸಂಪೂರ್ಣ ಸಹಕಾರ ಮತ್ತು ಬೆಂಬಲವನ್ನು ಒದಗಿಸುತ್ತಿದೆ "ಎಂದು ದೇಶಪಾಂಡೆ ಹೇಳಿದರು.
 ಚಿಕ್ಕಮಗಳೂರು, ಮಡಿಕೇರಿ ಮತ್ತು ಕಾರವಾರದಲ್ಲಿ ವಿಮಾನ್ ನಿಲ್ದಾಣ  ಸಂಬಂಧಿತ ಕಾರ್ಯಗಳಿಗಾಗಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ವಾರ್ಷಿಕ ಯೋಜನೆ 2017-18ರಲ್ಲಿ  89.29 ಕೋಟಿ ರೂ. ವೆಚ್ಚ ಮಾದುತ್ತಿದ್ದು ಉತ್ತಮ ಅಭಿವೃದ್ದಿ ಕಾರ್ಯಗಳಾಗುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮ: ಸಿಎಂ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು; ನಾಲ್ವರಿಗೆ ಗಾಯ

ಛತ್ತೀಸ್‌ಗಢದಲ್ಲಿ ಆಘಾತಕಾರಿ ಕಳ್ಳತನ: 10 ಟನ್ ತೂಕದ ಕಬ್ಬಿಣದ ಸೇತುವೆಯನ್ನೇ ಕದ್ದೊಯ್ದ ಖದೀಮರು!

'ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆ ರಿಸೀವ್ ಮಾಡಲೇಬೇಕು': ಕರ್ನಾಟಕ ಮುಖ್ಯಕಾರ್ಯದರ್ಶಿ ಹೊಸ ಸುತ್ತೋಲೆ!

ರಾಜಸ್ಥಾನದಲ್ಲಿ ಶೀತ ಅಲೆ ತೀವ್ರ; ಮೌಂಟ್ ಅಬುನಲ್ಲಿ -7 ಡಿಗ್ರಿಗೆ ತಾಪಮಾನ ಕುಸಿತ, Video

ಬಾರ್ಡರ್ 2 ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್: ಮೊದಲ ದಿನ 31.10 ಕೋಟಿ ರೂ ಗಳಿಕೆ

SCROLL FOR NEXT