ಪ್ರೊ.ಬಿವಿ ವೀರಭದ್ರಪ್ಪ (ಸಂಗ್ರಹ ಚಿತ್ರ) 
ರಾಜ್ಯ

ಹಿರಿಯ ವಿಚಾರವಾದಿ ಬಿವಿ ವೀರಭದ್ರಪ್ಪ ನಿಧನ!

ಹಿರಿಯ ವಿಚಾರವಾದಿ, ಖ್ಯಾತ ಚಿಂತಕ ಹಾಗೂ ಹಿರಿಯ ಪತ್ರಕರ್ತ ಬಿ.ವಿ.ವೀರಭದ್ರಪ್ಪ ಗುರುವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ದಾವಣಗೆರೆ: ಹಿರಿಯ ವಿಚಾರವಾದಿ, ಖ್ಯಾತ ಚಿಂತಕ ಹಾಗೂ ಹಿರಿಯ ಪತ್ರಕರ್ತ ಬಿ.ವಿ.ವೀರಭದ್ರಪ್ಪ ಗುರುವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಕಳೆದ ಎರಡು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೀರಭದ್ರಪ್ಪ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ 3:30ರ ಸುಮಾರಿನಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಸಂಜೆ ವೇಳೆಗೆ ಪ್ರೊ.ಬಿ.ವಿ.ವೀರಭದ್ರಪ್ಪ ಅವರ ಆಶಯದಂತೆ ನಗರದ ಜೆಜೆಎಂ ವೈದ್ಯಕೀಯ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮಾಧ್ಯಮವೊಂದು ವರದಿ ಮಾಡಿರುವಂತೆ ವೀರಭದ್ರಪ್ಪ ಅವರು ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದರು. ಸುಮಾರ ಎರಡು ದಶಕಗಳ ಕಾಲ ಲಂಕೇಶ್ ಪತ್ರಿಕೆ ಪ್ರತಿನಿಧಿ ಹಾಗೂ 100ಕ್ಕೂ ಹೆಚ್ಚು ಕೃತಿಗಳನ್ನ ರಚಿಸಿದ್ದ ವೀರಭದ್ರಪ್ಪ ಪತ್ರಿಕೋದ್ಯಮದಲ್ಲಿ ಗಮನ ಸೆಳೆದಿದ್ದರು. ಪ್ರೊ.ಬಿ.ವಿ.ವೀರಭದ್ರಪ್ಪ ಅವರ 'ವೇದಾಂತ ರೆಜಿಮೆಂಟ್' ಕೃತಿಯನ್ನು ಪಿ.ಲಂಕೇಶ್ ತಮ್ಮ ಪತ್ರಿಕೆ ಪ್ರಕಾಶನದಿಂದ ಪ್ರಕಟಿಸಿದ್ದರು. ಮೌಢ್ಯ, ಶೋಷಣೆ, ಬೌದ್ಧಿಕ ಗುಲಾಮಗಿರಿಯನ್ನು ವೈಚಾರಿಕ ನಿಲುವಿನಿಂದ ಬಿವಿ ವೀರಭದ್ರಪ್ಪ ವಿಶ್ಲೇಷಿಸುತ್ತಿದ್ದರು. ಅಲ್ಲದೆ ಪುರೋಹಿತಶಾಹಿ ದಬ್ಬಾಳಿಕೆ ಇಲ್ಲಿ 'ವೇದಾಂತ ರೆಜಿಮೆಂಟ್' ಆಗಿದೆ" ಎಂದು ಹೇಳಿ ಚರ್ಚೆಗೀಡಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT