ಸಿದ್ಧಗಂಗಾ ಶ್ರೀ (ಸಂಗ್ರಹ ಚಿತ್ರ) 
ರಾಜ್ಯ

ಸಿದ್ಧಗಂಗಾ ಶ್ರೀಗಳಿಗೆ ಅನಾರೋಗ್ಯ, ಬಿಜಿಎಸ್ ಆಸ್ಪತ್ರೆಗೆ ದಾಖಲು

ಸಿದ್ಧಗಂಗಾ ಮಠದ ಶ್ರೀಗಳಾದ ಶತಾಯುಷಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಅನಾರೋಗ್ಯದ ಕಾರಣ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರು: ಸಿದ್ಧಗಂಗಾ ಮಠದ ಶ್ರೀಗಳಾದ ಶತಾಯುಷಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಅನಾರೋಗ್ಯದ ಕಾರಣ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಲಗಳ ಪ್ರಕಾರ ಶ್ರೀಗಳಿಗೆ ಗಂಭೀರ ಸಮಸ್ಯೆ ಏನೂ ಆಗಿಲ್ಲ. ಆದರೆ ಕಫ, ಜ್ವರ ಹಾಗೂ ಗಂಟಲು ಕಟ್ಟುವಿಕೆ ಸಮಸ್ಯೆಯಿಂದಾಗಿ ಶ್ರೀಗಳು ಬಳಲುತ್ತಿದ್ದರು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಾಲಗಂಗಾಧರನಾಥ  ಸ್ವಾಮಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಶ್ರೀಗಳನ್ನು ಪರೀಕ್ಷಿಸಿರುವ ವೈದ್ಯರು ಶ್ರೀಗಳಿಗೆ ಗಂಭೀರ ಸಮಸ್ಯೆ ಏನೂ ಆಗಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಶ್ರೀಗಳನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆಯೂ ಶ್ರೀಗಳು ಶ್ವಾಸಕೋಶದ ಸೋಂಕಿನಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT