ಮಾಜಿ ಕಾರ್ಪೋರೇಟರ್ ನಾಗರಾಜ್ (ಸಂಗ್ರಹ ಚಿತ್ರ) 
ರಾಜ್ಯ

ಬಾಂಬ್ ನಾಗ ಮತ್ತು ಪುತ್ರರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು!

ಹವಾಲಾ ದಂಧೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧನಕ್ಕೀಡಾಗಿದ್ದ ಮಾಜಿ ಕಾರ್ಪೋರೇಟರ್ ಹಾಗೂ ರೌಡಿ ಶೀಟರ್ ನಾಗರಾಜು (ಬಾಂಬ್ ನಾಗ) ಮತ್ತು ಅವರ ಇಬ್ಬರು ಪುತ್ರರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಹವಾಲಾ ದಂಧೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧನಕ್ಕೀಡಾಗಿದ್ದ ಮಾಜಿ ಕಾರ್ಪೋರೇಟರ್ ಹಾಗೂ ರೌಡಿ ಶೀಟರ್ ನಾಗರಾಜು (ಬಾಂಬ್ ನಾಗ) ಮತ್ತು ಅವರ ಇಬ್ಬರು ಪುತ್ರರಿಗೆ  ಕರ್ನಾಟಕ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜೀವ ಬೆದರಿಕೆ, ಅಪಹರಣ, ಅಕ್ರಮ ಹಣ ಸಾಗಣೆ, ಹವಾಲಾ ದಂಧೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಬಾಂಬ್ ನಾಗನ ವಿರುದ್ಧ ದೂರು ದಾಖಲಾಗಿತ್ತು. ಇದೇ ಕಾರಣಕ್ಕೆ ಶ್ರೀರಾಂಪುರದಲ್ಲಿರುವ ಬಾಂಬ್ ನಾಗನ ಕಚೇರಿ ಹಾಗೂ  ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಬ್ಯಾನ್ ಆಗಿದ್ದ ನೋಟುಗಳನ್ನು ವಶಕ್ಕೆ ಪಡೆದಿದ್ದರು. ಬಳಿಕ ತಲೆಮರೆಸಿಕೊಂಡಿದ್ದ ನಾಗನನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಎರಡು ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮತ್ತು ಪ್ರತೀ ಗುರುವಾರ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ಹೈ ಕೋರ್ಟ್ ಏಕಸದಸ್ಯ ಪೀಠ ನಾಗ ಮತ್ತು ಆತನ ಇಬ್ಬರು ಪುತ್ರರಾದ  ಶಾಸ್ತ್ರೀ ಮತ್ತು ಗಾಂಧಿಗೆ ಜಾಮೀನು ಮಂಜೂರು ಮಾಡಿದೆ.

ಮೂವರು ಉದ್ಯಮಿಗಳಿಗೆ ವಂಚಿಸಿದ ಆರೋಪ ಸೇರಿದಂತೆ ಇನ್ನಿತರ ಪ್ರಕರಣಗಳಿಗೆ ಸಂಬಂಧಿಸಿ ನಾಗರಾಜು, ಆತನ ಮಕ್ಕಳಾದ ಗಾಂಧೀ,ಶಾಸ್ತ್ರೀ, ಸಹಚರರಾದ ಜಯ ಕೃಷ್ಣ, ಸರವಣ್‌, ಸೌಂದರ್ಯರಾಜ್ ರನ್ನು ಪೊಲೀಸರು  ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT