ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಮೊಗ್ಗ: ಎಕ್ಸ್ ಪ್ರೆಸ್ ಪತ್ರಿಕೆ ಛಾಯಾಗ್ರಾಹಕನ ಮೇಲೆ ಯುವಕರ ಗುಂಪು ಹಲ್ಲೆ

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಛಾಯಾಗ್ರಾಹಕ ಶಿವಮೊಗ್ಗ ನಂದನ್ ಮೇಲೆ ಯುವಕರ ....

ಶಿವಮೊಗ್ಗ: ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಛಾಯಾಗ್ರಾಹಕ ಶಿವಮೊಗ್ಗ ನಂದನ್ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ ಘಟನೆ ನಿನ್ನೆ ಶಿವಮೊಗ್ಗ ಸಮೀಪ ನಡೆದಿದೆ. 
ಯುವಕರ ಗುಂಪೊಂದು ಅಬ್ಬಲಗೆರೆಯಿಂದ ಶಿವಮೊಗ್ಗ ಕಡೆಗೆ ಬೈಕಿನಲ್ಲಿ ವೇಗವಾಗಿ ಬರುತ್ತಿತ್ತು. ಕಂಡ ಕಂಡ ಹುಡುಗಿಯರನ್ನು ಚುಡಾಯಿಸುತ್ತಾ ಬರುತ್ತಿತ್ತು. ಪಾನಮತ್ತರಾಗಿದ್ದ ಈ ಯುವಕರ ಫೋಟೋವನ್ನು ನಮ್ಮ ಪತ್ರಿಕೆಯ ಛಾಯಾಗ್ರಾಹಕ ಶಿವಮೊಗ್ಗ ನಂದನ್ ತೆಗೆಯಲು ಯತ್ನಿಸಿದರು. ಆಗ ಅವರ ಮೇಲೆ ಹಲ್ಲೆ ಮಾಡಿದ್ದಾರೆ.
ಮೂರು ಬೈಕ್ ನಲ್ಲಿ ಅರಚುತ್ತಾ, ಹುಡುಗಿಯರನ್ನು ಚುಡಾಯಿಸುತ್ತಾ ಆರು ಮಂದಿ ಯುವಕರ ಗುಂಪು ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ಪಾನಮತ್ತರಾಗಿ ಬರುತ್ತಿದ್ದರು. ನಂದನ್ ಅವರ ದುರ್ವರ್ತನೆಯನ್ನು ಮೊಬೈಲ್ ನಲ್ಲಿ ಸೆರೆಹಿಡಿಯುವುದನ್ನು ನೋಡಿದರು. ಆಗ ಒಬ್ಬ ಬೈಕಿನಿಂದ ನೆಗೆದು ಬಂದು ನಂದನ್ ಗೆ ಹೊಡೆದಿದ್ದಾನೆ.
ನಂದನ್ ಜೊತೆ ಇದ್ದ ಮತ್ತೊಬ್ಬ ಛಾಯಾಗ್ರಾಹಕ ಯುವಕನನ್ನು ತಕ್ಷಣವೇ ಅಲ್ಲಿ ಜನ ಸೇರಿ ಯುವಕನಿಗೆ ಹೊಡೆದು ಪೊಲೀಸರಲ್ಲಿಗೆ ಕರೆದುಕೊಂಡು ಹೋದರು. ನಂತರ ಆತನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಯಿತು.ಪೊಲೀಸರು ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಯುವಕರೆಲ್ಲರೂ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT