ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ತಾಯಿಯ ಎದುರೇ ಅಣ್ಣನನ್ನು ಇರಿದು ಕೊಂದ ತಮ್ಮ

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಹೋದರನನ್ನು ತಾಯಿಯ ಎದುರೇ ಇರಿದು ಕೊಂದಿರುವ ಘಟನೆ ನಗರದ ಕರಿಯಪ್ಪನ ಪಾಳ್ಯದಲ್ಲಿ...

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಹೋದರನನ್ನು ತಾಯಿಯ ಎದುರೇ ಇರಿದು ಕೊಂದಿರುವ ಘಟನೆ ನಗರದ ಕರಿಯಪ್ಪನ ಪಾಳ್ಯದಲ್ಲಿ ನಡೆದಿದೆ.
ರಾಯ್ಸನ್ ರಜಾರಿಯಾ (40) ಎಂಬಾತ ತನ್ನ ಸಹೋದರ ಆಸ್ಕರ್ ರಜಾರಿಯಾ (48) ನನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಲಿಂಗರಾಜಪುರ ಸಮೀಪದ ಕರಿಯಣ್ಣನಪಾಳ್ಯದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. 
ಆಂಧ್ರ ಪ್ರದೇಶ ಮೂಲದ ಇವರು ತಮ್ಮ 79 ವರ್ಷದ ತಾಯಿಯ ಜೊತೆ, ಕರಿಯಣ್ಣನಪಾಳ್ಯದಲ್ಲಿ ಇಬ್ಬರು ಪ್ಲಂಬರ್ ಕೆಲಸ ಮಾಡುತ್ತಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ರಾಯ್ಸನ್ ಅವರು ರಾತ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಆಸ್ಕರ್, ಮನೆಗೆ ಬೀಗ ಹೊರಗೆ ಹೋಗಿದ್ದ. ತಾಯಿಯೊಂದಿಗೆ ಆಸ್ಪತ್ರೆಯಿಂದ ಮರಳಿದ ರಾಯ್ಸನ್, ಮನೆಗೆ ಬೀಗ ಹಾಕಿದ್ದರಿಂದ ಅಣ್ಣನಿಗೆ ಕರೆ ಮಾಡಿದ್ದರು. ಆದರೆ ಮೊಬೈಲ್ ಸ್ವಿಚ್ ಆಫ್ ಆಗಿತ್ತು. 
ಎಷ್ಟು ಹೊತ್ತು ಕಾದರೂ ಅಣ್ಣ ಬಾರದಿದ್ದಾಗ ಕುಪಿತಗೊಂಡ ರಾಯ್ಸನ್, ತಾಯಿಯನ್ನು ಮನೆ ಸಮೀಪದ ಕಟ್ಟೆ ಮೇಲೆ ಕೂರಿಸಿ ಸುತ್ತಮುತ್ತಲ ಪ್ರದೇಶಗಳಲ್ಲೆಲ್ಲ ಹುಡುಕಾಟ ನಡೆಸಿದ್ದರು. 
ಅದಾದ  ನಂತರ ಆಸ್ಕರ್ ಮೊಟ್ಟೆ ತೆಗೆದುಕೊಂಡು ಮನೆಗೆ ಬರುತ್ತಿದ್ದಂತೆಯೇ ರಾಯ್ಸನ್ ಗಲಾಟೆ ಶುರು ಮಾಡಿದ್ದಾನೆ. ಮೊಟ್ಟೆಗಳಿದ್ದ ಪೊಟ್ಟಣವನ್ನು ಕಿತ್ತೆಸಿದ್ದಾರೆ. ನಂತರ ಪರಸ್ಪರರ ನಡುವೆ ಗಲಾಟೆ ಜೋರಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ.
ಈ ವೇಳೆ ಆರೋಪಿಯು  ಅಡುಗೆ ಮನೆಯಿಂದ ಚಾಕು ತಂದು ಇರಿದಿದ್ದಾನೆ. ಕಿರುಚಾಟ ಕೇಳಿದ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಿಶೀಲನೆ ನಡೆಸಿದ ವೈದ್ಯರು ಆತ ಮೃತ ಪಟ್ಟಿರುವುದಾಗಿ ಹೇಳಿದ್ದಾರೆ.  ಬಾಣಸವಾಡಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT