ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ತಾಯಿಯ ಎದುರೇ ಅಣ್ಣನನ್ನು ಇರಿದು ಕೊಂದ ತಮ್ಮ

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಹೋದರನನ್ನು ತಾಯಿಯ ಎದುರೇ ಇರಿದು ಕೊಂದಿರುವ ಘಟನೆ ನಗರದ ಕರಿಯಪ್ಪನ ಪಾಳ್ಯದಲ್ಲಿ...

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಹೋದರನನ್ನು ತಾಯಿಯ ಎದುರೇ ಇರಿದು ಕೊಂದಿರುವ ಘಟನೆ ನಗರದ ಕರಿಯಪ್ಪನ ಪಾಳ್ಯದಲ್ಲಿ ನಡೆದಿದೆ.
ರಾಯ್ಸನ್ ರಜಾರಿಯಾ (40) ಎಂಬಾತ ತನ್ನ ಸಹೋದರ ಆಸ್ಕರ್ ರಜಾರಿಯಾ (48) ನನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಲಿಂಗರಾಜಪುರ ಸಮೀಪದ ಕರಿಯಣ್ಣನಪಾಳ್ಯದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. 
ಆಂಧ್ರ ಪ್ರದೇಶ ಮೂಲದ ಇವರು ತಮ್ಮ 79 ವರ್ಷದ ತಾಯಿಯ ಜೊತೆ, ಕರಿಯಣ್ಣನಪಾಳ್ಯದಲ್ಲಿ ಇಬ್ಬರು ಪ್ಲಂಬರ್ ಕೆಲಸ ಮಾಡುತ್ತಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ರಾಯ್ಸನ್ ಅವರು ರಾತ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಆಸ್ಕರ್, ಮನೆಗೆ ಬೀಗ ಹೊರಗೆ ಹೋಗಿದ್ದ. ತಾಯಿಯೊಂದಿಗೆ ಆಸ್ಪತ್ರೆಯಿಂದ ಮರಳಿದ ರಾಯ್ಸನ್, ಮನೆಗೆ ಬೀಗ ಹಾಕಿದ್ದರಿಂದ ಅಣ್ಣನಿಗೆ ಕರೆ ಮಾಡಿದ್ದರು. ಆದರೆ ಮೊಬೈಲ್ ಸ್ವಿಚ್ ಆಫ್ ಆಗಿತ್ತು. 
ಎಷ್ಟು ಹೊತ್ತು ಕಾದರೂ ಅಣ್ಣ ಬಾರದಿದ್ದಾಗ ಕುಪಿತಗೊಂಡ ರಾಯ್ಸನ್, ತಾಯಿಯನ್ನು ಮನೆ ಸಮೀಪದ ಕಟ್ಟೆ ಮೇಲೆ ಕೂರಿಸಿ ಸುತ್ತಮುತ್ತಲ ಪ್ರದೇಶಗಳಲ್ಲೆಲ್ಲ ಹುಡುಕಾಟ ನಡೆಸಿದ್ದರು. 
ಅದಾದ  ನಂತರ ಆಸ್ಕರ್ ಮೊಟ್ಟೆ ತೆಗೆದುಕೊಂಡು ಮನೆಗೆ ಬರುತ್ತಿದ್ದಂತೆಯೇ ರಾಯ್ಸನ್ ಗಲಾಟೆ ಶುರು ಮಾಡಿದ್ದಾನೆ. ಮೊಟ್ಟೆಗಳಿದ್ದ ಪೊಟ್ಟಣವನ್ನು ಕಿತ್ತೆಸಿದ್ದಾರೆ. ನಂತರ ಪರಸ್ಪರರ ನಡುವೆ ಗಲಾಟೆ ಜೋರಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ.
ಈ ವೇಳೆ ಆರೋಪಿಯು  ಅಡುಗೆ ಮನೆಯಿಂದ ಚಾಕು ತಂದು ಇರಿದಿದ್ದಾನೆ. ಕಿರುಚಾಟ ಕೇಳಿದ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಿಶೀಲನೆ ನಡೆಸಿದ ವೈದ್ಯರು ಆತ ಮೃತ ಪಟ್ಟಿರುವುದಾಗಿ ಹೇಳಿದ್ದಾರೆ.  ಬಾಣಸವಾಡಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT