ನಯನಾ ಜೋಗಿ - ಎಚ್ ಆಂಜನೇಯ 
ರಾಜ್ಯ

ಸಚಿವ ಎಚ್.ಆಂಜನೇಯಗೆ ಬಹಿರಂಗ ಸವಾಲು ಹಾಕಿದ ಚಿತ್ರದುರ್ಗ ಬಾಲಕಿ

ಸರ್ಕಾರಿ ಶಾಲೆಗಳಲ್ಲಿ ಮೊದಲು ಸೂಕ್ತ ಸೌಲಭ್ಯ ಒದಗಿಸಿ, ನಂತರ ನಾನೂ ಸರ್ಕಾರಿ ಶಾಲೆ ಸೇರುತ್ತೇನೆ ಎಂದು ಚಿತ್ರದುರ್ಗದ....

ಚಿತ್ರದುರ್ಗ: ಸರ್ಕಾರಿ ಶಾಲೆಗಳಲ್ಲಿ ಮೊದಲು ಸೂಕ್ತ ಸೌಲಭ್ಯ ಒದಗಿಸಿ, ನಂತರ ನಾನೂ ಸರ್ಕಾರಿ ಶಾಲೆ ಸೇರುತ್ತೇನೆ ಎಂದು ಚಿತ್ರದುರ್ಗದ ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳು ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲ ಉಸ್ತುವಾರಿ ಸಚಿವ ಎಚ್ ಆಂಜನೇಯ ಅವರಿಗೆ ಬಹಿರಂಗ ಸವಾಲು ಹಾಕಿದ ಘಟನೆ ಶುಕ್ರವಾರ ನಡೆದಿದೆ.
'ಸಚಿವರು ಸರ್ಕಾರಿ ಶಾಲೆಗಳನ್ನು ಉಳಿಸಿ ಅಂತ ಭಾಷಣ ಮಾಡಿದರೆ ಸಾಲದು. ಸರ್ಕಾರಿ ಶಾಲೆಗಳಿಗೆ ಖಾಸಗಿ ಶಾಲೆಗಳಂತೆ ಮೂಲ ಸೌಲಭ್ಯ ಕಲ್ಪಿಸಿ, ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳ ಮಕ್ಕಳನ್ನು ಆ ಶಾಲೆಗೆ ಸೇರಿಸಿದರೆ, ನಾನು ಕೂಡ ಅಲ್ಲಿಗೆ ಸೇರುತ್ತೇನೆ....’ ಹೀಗೆ ಕಡ್ಡಿ ಮುರಿದಂತೆ ಮಾತನಾಡಿ, ಸಚಿವ ಎಚ್. ಆಂಜನೇಯ ಅವರಿಗೆ ಸವಾಲು ಹಾಕಿದ ವಿದ್ಯಾರ್ಥಿನಿ ಹೆಸರು ನಯನಾ ಜೋಗಿ. ಈಕೆ ಖಾಸಗಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ.
ಸಚಿವ ಆಂಜನೇಯ ಅವರು ಜಿಲ್ಲಾ ಮಟ್ಟದ ‘ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ’ದಲ್ಲಿ ಸರ್ಕಾರಿ ಶಾಲೆ ಉಳಿಸಬೇಕು’ ಎಂದು ಹೇಳಿಕೆ ನೀಡಿ ವೇದಿಕೆಯಿಂದ ಕೆಳಗಿಳಿಯುತ್ತಿರುವಾಗ, ಅವರನ್ನು ತಡೆದು ನಿಲ್ಲಿಸಿದ ನಯನಾ, ಈ ರೀತಿ ಸವಾಲು ಹಾಕಿದಳು.
‘ನನಗೂ ಸರ್ಕಾರಿ ಶಾಲೆಗೆ ಸೇರಲು ಇಷ್ಟ. ಆದರೆ, ಅಲ್ಲಿ ಸೌಲಭ್ಯಗಳಿಲ್ಲ. ಸರ್ಕಾರಿ ಶಾಲೆಗೆ ಉತ್ತಮ ಸೌಲಭ್ಯ ಕೊಡಿಸಿ. ನಾನು ಮಾತ್ರವಲ್ಲ, ನನ್ನ ಮೂವತ್ತು ಸ್ನೇಹಿತೆಯರ ಜತೆಗೂಡಿ ಸರ್ಕಾರಿ ಶಾಲೆಗೆ ಸೇರುತ್ತೇವೆ’ ಎಂದು ಹೇಳಿದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ- ನ್ಯೂಜಿಲೆಂಡ್ 'ಮುಕ್ತ ವ್ಯಾಪಾರ ಒಪ್ಪಂದ' ಅಂತಿಮ: ಭಾರಿ ಪ್ರಮಾಣದ ಸುಂಕ ಕಡಿತ! Video

Bangladesh Violence: ಉಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ ಬಾಂಗ್ಲಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ನಾಯಕನ ತಲೆಗೆ ಗುಂಡಿಕ್ಕಿದ ಅನಾಮಿಕರು!

ಸ್ಯಾಂಡಲ್ ವುಡ್ ನಲ್ಲಿ 'ಫ್ಯಾನ್ಸ್' ವಾರ್ ! 2011ರ ಹಳೆಯ 'ಫೋಟೋ ವೈರಲ್' ಮಾಡಿ, ವಿಜಯಲಕ್ಷ್ಮಿಗೆ ತಿರುಗೇಟು ಕೊಟ್ಟ ಕಿಚ್ಚನ ಅಭಿಮಾನಿಗಳು

ಶುಭಮನ್ ಗಿಲ್‌ರನ್ನು ತಂಡದಿಂದ ಕೈಬಿಡುವುದು 'ಅಗತ್ಯ'; ಸೂರ್ಯಕುಮಾರ್ ಯಾದವ್‌ಗೆ ಸ್ಥಾನ ನೀಡಿದ್ದು ಏಕೆ? ಕಾರಣ ಇಲ್ಲಿದೆ...

ಟನಲ್ ಯೋಜನೆ: ಇಕ್ಕಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ; ತಾನೇ ಟೀಕಿಸುತ್ತಿದ್ದ ಅದಾನಿ ಸಂಸ್ಥೆಯಿಂದ ಅತ್ಯಂತ ಕಡಿಮೆ ಬಿಡ್

SCROLL FOR NEXT