ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವಿದ್ಯಾರ್ಥಿಗೆ ಮನ ಬಂದಂತೆ ಥಳಿಸಿ ಕೆಲಸ ಕಳೆದುಕೊಂಡ ಶಿಕ್ಷಕ, ಕೇಸು ದಾಖಲು

ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ ಶಿಕ್ಷಕ ಕೆಲಸ ಕಳೆದುಕೊಂಡ ಘಟನೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅರಕೆರೆ ....

ಬೆಂಗಳೂರು: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ ಶಿಕ್ಷಕ ಕೆಲಸ ಕಳೆದುಕೊಂಡ ಘಟನೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅರಕೆರೆ ಸಮೀಪ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದಿದೆ. ಘಟನೆ ನಡೆದ ಒಂದು ದಿನದ ಬಳಿಕ ಶಾಲಾ ಆಡಳಿತ ವರ್ಗ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಿದೆ.
ಆನೆಕಲ್ ನಿವಾಸಿಯಾಗಿರುವ ಶಿಕ್ಷಕ ಅಶೋಕ್ ವಿರುದ್ಧ ಬನ್ನೇರುಘಟ್ಟ ಪೊಲೀಸರು ಕೇಸು ದಾಖಲಿಸಿದ್ದಾರೆ. ಈ ಘಟನೆ ನಡೆದಿದ್ದು ಕಳೆದ ಬುಧವಾರ. ಶಾಲಾ ಪ್ರಾಂಶುಪಾಲರು ಹಲ್ಲೆಗೀಡಾದ 9ನೇ ತರಗತಿ ಬಾಲಕನನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿ ನಂತರ ಪೋಷಕರಿಗೆ ವಿಷಯ ತಲುಪಿಸಲಾಯಿತು.
ವಿದ್ಯಾರ್ಥಿಯ ತಂದೆ ಖಯೂಮ್ ಪಾಷಾ ಜಿಗಣಿ ನಿವಾಸಿಯಾಗಿದ್ದು ಮೊನ್ನೆ ಶುಕ್ರವಾರ ಶಿಕ್ಷಕನ ವಿರುದ್ಧ ಕೇಸು ದಾಖಲಿಸಿದ್ದರು. ಪೊಲೀಸರು ಶಿಕ್ಷಕ ಅಶೋಕ್ ನನ್ನು ವಿಚಾರಣೆಗೆ ಕರೆಸಿಕೊಂಡಿದ್ದರು. 
ವಿದ್ಯಾರ್ಥಿ ಬೇರೆ ಮಕ್ಕಳ ಜೊತೆ ಜಗಳ ಮಾಡಿದ್ದ ಎಂದು ಶಿಕ್ಷಕ ಅಶೋಕ್ ಗೆ ಹೊಡೆದಿದ್ದರು. ತೀವ್ರವಾಗಿ ಬೆನ್ನಿಗೆ ಏಟು ಬಿದ್ದಿದ್ದರಿಂದ ವಿದ್ಯಾರ್ಥಿ ಗಾಯಗೊಂಡಿದ್ದ. ಬಾಲಕನ ತಂದೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದರಂತೆ. ಬಾಲಕನ ಮೇಲೆ ಹಲ್ಲೆಯಾಗಿದ್ದಕ್ಕೆ ವೈದ್ಯಕೀಯ ವರದಿ ನೀಡುವಂತೆ ಕೇಳಿದ್ದರು. ಇದರಿಂದ ಎಫ್ ಐಆರ್ ದಾಖಲಿಸಿಕೊಳ್ಳಲು ತಡವಾಯಿತು ಎಂದು ಪಾಶಾ ಹೇಳುತ್ತಾರೆ. 
ಆದರೆ ಪೊಲೀಸರು, ಬಾಲಕನ ತಂದೆ ದೂರು ನೀಡಿದ ತಕ್ಷಣವೇ ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರಡಿ ಕೇಸು ದಾಖಲಿಸಲಾಗಿದೆ ಎಂದು ಹೇಳುತ್ತಾರೆ. ಶಾಲಾ ಮುಖ್ಯಸ್ಥರನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಅವರು ಸಿಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT