ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವಿದ್ಯಾರ್ಥಿಗೆ ಮನ ಬಂದಂತೆ ಥಳಿಸಿ ಕೆಲಸ ಕಳೆದುಕೊಂಡ ಶಿಕ್ಷಕ, ಕೇಸು ದಾಖಲು

ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ ಶಿಕ್ಷಕ ಕೆಲಸ ಕಳೆದುಕೊಂಡ ಘಟನೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅರಕೆರೆ ....

ಬೆಂಗಳೂರು: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ ಶಿಕ್ಷಕ ಕೆಲಸ ಕಳೆದುಕೊಂಡ ಘಟನೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅರಕೆರೆ ಸಮೀಪ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದಿದೆ. ಘಟನೆ ನಡೆದ ಒಂದು ದಿನದ ಬಳಿಕ ಶಾಲಾ ಆಡಳಿತ ವರ್ಗ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಿದೆ.
ಆನೆಕಲ್ ನಿವಾಸಿಯಾಗಿರುವ ಶಿಕ್ಷಕ ಅಶೋಕ್ ವಿರುದ್ಧ ಬನ್ನೇರುಘಟ್ಟ ಪೊಲೀಸರು ಕೇಸು ದಾಖಲಿಸಿದ್ದಾರೆ. ಈ ಘಟನೆ ನಡೆದಿದ್ದು ಕಳೆದ ಬುಧವಾರ. ಶಾಲಾ ಪ್ರಾಂಶುಪಾಲರು ಹಲ್ಲೆಗೀಡಾದ 9ನೇ ತರಗತಿ ಬಾಲಕನನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿ ನಂತರ ಪೋಷಕರಿಗೆ ವಿಷಯ ತಲುಪಿಸಲಾಯಿತು.
ವಿದ್ಯಾರ್ಥಿಯ ತಂದೆ ಖಯೂಮ್ ಪಾಷಾ ಜಿಗಣಿ ನಿವಾಸಿಯಾಗಿದ್ದು ಮೊನ್ನೆ ಶುಕ್ರವಾರ ಶಿಕ್ಷಕನ ವಿರುದ್ಧ ಕೇಸು ದಾಖಲಿಸಿದ್ದರು. ಪೊಲೀಸರು ಶಿಕ್ಷಕ ಅಶೋಕ್ ನನ್ನು ವಿಚಾರಣೆಗೆ ಕರೆಸಿಕೊಂಡಿದ್ದರು. 
ವಿದ್ಯಾರ್ಥಿ ಬೇರೆ ಮಕ್ಕಳ ಜೊತೆ ಜಗಳ ಮಾಡಿದ್ದ ಎಂದು ಶಿಕ್ಷಕ ಅಶೋಕ್ ಗೆ ಹೊಡೆದಿದ್ದರು. ತೀವ್ರವಾಗಿ ಬೆನ್ನಿಗೆ ಏಟು ಬಿದ್ದಿದ್ದರಿಂದ ವಿದ್ಯಾರ್ಥಿ ಗಾಯಗೊಂಡಿದ್ದ. ಬಾಲಕನ ತಂದೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದರಂತೆ. ಬಾಲಕನ ಮೇಲೆ ಹಲ್ಲೆಯಾಗಿದ್ದಕ್ಕೆ ವೈದ್ಯಕೀಯ ವರದಿ ನೀಡುವಂತೆ ಕೇಳಿದ್ದರು. ಇದರಿಂದ ಎಫ್ ಐಆರ್ ದಾಖಲಿಸಿಕೊಳ್ಳಲು ತಡವಾಯಿತು ಎಂದು ಪಾಶಾ ಹೇಳುತ್ತಾರೆ. 
ಆದರೆ ಪೊಲೀಸರು, ಬಾಲಕನ ತಂದೆ ದೂರು ನೀಡಿದ ತಕ್ಷಣವೇ ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರಡಿ ಕೇಸು ದಾಖಲಿಸಲಾಗಿದೆ ಎಂದು ಹೇಳುತ್ತಾರೆ. ಶಾಲಾ ಮುಖ್ಯಸ್ಥರನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಅವರು ಸಿಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT