ಸಿಎಂ ಸಿದ್ದರಾಮಯ್ಯ 
ರಾಜ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಸಚಿವ ಜಾರ್ಜ್ ವಿರುದ್ಧ ಬಿಜೆಪಿಯಿಂದ ಕಸ ಹಗರಣ ದೂರು ದಾಖಲು

ಮಹಾ ನಗರ ಪಾಲಿಕೆಯ 688 ಕೋಟಿ ರೂಪಾಯಿ ಮೊತ್ತದ ಬಹುದೊಡ್ಡ ಕಸ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ...

ಬೆಂಗಳೂರು: ನಗರ ಪಾಲಿಕೆಯ 688 ಕೋಟಿ ರೂಪಾಯಿ ಮೊತ್ತದ ಬಹುದೊಡ್ಡ ಕಸ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ.ಜಾರ್ಜ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೆಂಗಳೂರು ನಗರ ಘಟಕ ನಿನ್ನೆ ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದೆ.
ಬೆಂಗಳೂರು ನಗರ ಬಿಜೆಪಿ ಘಟಕದ ವಕ್ತಾರ ಎನ್.ಆರ್.ರಮೇಶ್, ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯ ಪಡೆ ಮತ್ತು ಹೆಚ್ಚುವರಿ ನಗರ ಮೆಟ್ರೊ ಪಾಲಿಟನ್ ಮ್ಯಾಜಿಸ್ಟ್ರೇಟ್ ಗೆ ಕೂಡ ಹಗರಣ ನಡೆದಿದೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ.
2016-17ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಸ ವಿಲೇವಾರಿಗೆ 1,066 ಕೋಟಿ ರೂಪಾಯಿ ವೆಚ್ಚ ಮಾಡಿತ್ತು. ಅದರ ಹಿಂದಿನ ವರ್ಷ ಕಸ ವಿಲೇವಾರಿಗೆ ಆದ ವೆಚ್ಚ 385 ಕೋಟಿ ರೂಪಾಯಿಗಳು. ಒಂದೇ ವರ್ಷದಲ್ಲಿ ಕಸ ವಿಲೇವಾರಿಗೆ 688 ಕೋಟಿ ರೂಪಾಯಿ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ತಿಂಗಳಲ್ಲಿ 88.87 ಕೋಟಿ ರೂಪಾಯಿ ಖರ್ಚಾಗುತ್ತದೆ. 

ಈ ಮೂಲಕ ಬಿಬಿಎಂಪಿ ಈ ಹಣಕಾಸು ವರ್ಷದ ಕೊನೆಗೆ 1,066.44 ಕೋಟಿ ರೂಪಾಯಿ ವೆಚ್ಚ ಮಾಡಲಿದೆ. ಅಂದರೆ ಸುಮಾರು ಶೇಕಡಾ 265 ರಷ್ಟು ಹೆಚ್ಚಳವಾದಂತಾಗುತ್ತದೆ ಎಂದು ರಮೇಶ್ ಅಂಕಿಅಂಶ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಯಾಗಲಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಆಗಲಿ ಪ್ರತಿಕ್ರಿಯೆಗೆ ಸಿಕ್ಕಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?